ಬೆಂಗಳೂರು : ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ಎದೆ ನೋವಿನಿಂದ ಬಳಲುತ್ತಿದ್ದು, ತಡರಾತ್ರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಧ್ಯರಾತ್ರಿ 1.30ರ ಸುಮಾರಿಗೆ ಆಸ್ಪತ್ರೆಗೆ ದಾಖಲಾಗಿರೋ ಮಾಜಿ ಸಚಿವ ಡಿಕೆಶಿ ಎದೆ ನೋವು, ಹೈ ಬಿಪಿಯಿಂದ ಬಳಲುತ್ತಿದ್ದಾರೆ. ತಡರಾತ್ರಿ ಏಕಾಏಕಿ ಆರೋಗ್ಯ ಸಮಸ್ಯೆಗೆ ತುತ್ತಾದ ಅವರನ್ನು ಕುಟುಂಬ ಸದಸ್ಯರು ಬೆಂಗಳೂರಿನ ಶೇಷಾದ್ರಿಪುರದ ಅಪೋಲೋ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದಾರೆ. ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ. ಶಿವಕುಮಾರ್ ಕುಟುಂಬ ವೈದ್ಯರಾದ ಡಾ. ಶಂಕರ್ ಚಿಕಿತ್ಸೆ ನೀಡುತ್ತಿದ್ದು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಕುಟುಂಬ ಸದಸ್ಯರಿಗೆ ಭರವಸೆ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.
ಡಿಕೆಶಿ ಕುಟುಂಬ ಸದಸ್ಯರ ಮನವಿ ಅನಾರೋಗ್ಯದಿಂದ ಸೋಮವಾರ ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಕಡ್ಡಾಯ ವಿಶ್ರಾಂತಿ ಅಗತ್ಯ ಎಂದು ವೈದ್ಯರು ಸಲಹೆ ಮಾಡಿರುವುದರಿಂದ ಕನಿಷ್ಟ ಮೂರು ದಿನಗಳ ಕಾಲವಾದರೂ ಯಾರೂ ಅವರ ಭೇಟಿಗೆ ಬರಬಾರದು ಎಂದು ಶಿವಕುಮಾರ್ ಅವರ ಕುಟುಂಬ ಸದಸ್ಯರು ಮನವಿ ಮಾಡಿದ್ದಾರೆ.
ಈ ಹಿನ್ನೆಲೆ ಆಸ್ಪತ್ರೆಗೆ ಯಾರನ್ನು ಬಿಡುವ ಸಾಧ್ಯತೆ ಇಲ್ಲವಾಗಿದೆ. ಬಂದವರು ವೈದ್ಯರನ್ನು ಸಂಪರ್ಕಿಸಿ ತೆರಳುವ ಅವಕಾಶ ಮಾತ್ರ ಸಿಗಲಿದೆ.