ಬೈಂದೂರು : ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ನಾಲ್ವರ ಬಂಧನ

2:00 PM, Friday, November 15th, 2019
Share
1 Star2 Stars3 Stars4 Stars5 Stars
(No Ratings Yet)
Loading...

Bybdoor

ಬೈಂದೂರು : ಬೈಂದೂರು ಸಮೀಪದ ನಾಗೂರು ಬಳಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಜಾನುವಾರು ತುಂಬಿದ್ದ ಕಂಟೈನರ್ ಒಂದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಗುಜರಾತಿನಿಂದ ಮಂಗಳೂರಿಗೆ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಪೊಲೀಸರು ರಕ್ಷಿಸಿದ್ದು ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ಗುಜರಾತ್ ನಿಂದ ಮಂಗಳೂರಿಗೆ ಬರುತ್ತಿದ್ದ ಕಂಟೈನರ್ ನಲ್ಲಿ ಒಟ್ಟು 32 ಕೋಣಗಳಿದ್ದು, ಅದರಲ್ಲಿ ಒಂದು ಮೃತಪಟ್ಟಿದೆ.

ಕುಂದಾಪುರ ಎಎಸ್ಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು ಮಲ್ಲಿಕ್, ಸಮೀರ್, ಸಾಧಿಕ್, ಮಲ್ಲಿಕ್ ಸಾಹಿದ್ ಬಂಧಿತ ಆರೋಪಿಗಳು.

ಗುಜರಾತಿನಿಂದ ಮಂಗಳೂರಿಗೆ ಕಂಟೆನರ್ ವಾಹನದಲ್ಲಿ 32 ಕೋಣ, ಎಮ್ಮೆಗಳನ್ನು ಕಾಲು ಕಟ್ಟಿ ಹಿಂಸಾತ್ಮಕವಾಗಿ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಪೊಲೀಸರಿಗೆ ಸಿಕ್ಕ ಖಚಿತ ಮಾಹಿತಿ ಆಧಾರದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಹಿಂಸಾತ್ಮಕ ಸಾಗಾಟದ ವೇಳೆ 1 ಜಾನುವಾರು ಸಾವನ್ನಪಿದ್ದು ಉಳಿದ ಜಾನುವಾರುಗಳನ್ನು ಬೈಂದೂರು ಪೊಲೀಸರು ರಕ್ಷಿಸಿ ಆರೈಕೆ ಮಾಡಿದ್ದಾರೆ.

ಬೈಂದೂರು ಸಿಪಿಐ ಸುರೇಶ್ ನಾಯಕ್ ಸ್ಥಳಕ್ಕೆ ಭೇಟಿ ನೀಡಿದ್ದು ಪ್ರಕರಣ ದಾಖಲಾಗಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English