- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಹೆದ್ದಾರಿಯಯಲ್ಲಿ ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಢಿಕ್ಕಿ ಮಹಿಳೆ ಮೃತ್ಯು

priya suvarna [1]ಮಂಗಳೂರು : ಕುಂಟಿಕಾನ ಹೆದ್ದಾರಿಯ ಖಾಸಗಿ ಹೋಟೆಲ್ ಸಮೀಪ ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸ್ಥಳೀಯ ಮಹಿಳೆಯೋರ್ವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ  ಬುಧವಾರ ನಡೆದಿದೆ.

ಕಾವೂರು ನಿವಾಸಿ ಪ್ರಿಯಾ ಸುವರ್ಣ (42) ಮೃತರು ಎಂದು ಗುರುತಿಸಲಾಗಿದೆ.

ಅವರು ದ್ವಿಚಕ್ರ ವಾಹನದಲ್ಲಿ ಮನೆಯಿಂದ ಕೆಪಿಟಿ ಕಡೆಗೆ ತೆರಳುತ್ತಿದ್ದರು. ಈ ವೇಳೆ ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ರಸ್ತೆಗೆಸೆಯಲ್ಪಟ್ಟ ಪ್ರಿಯಾ ಸುವರ್ಣ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲೇ ತೀವ್ರ ರಕ್ತಸ್ರಾವದಿಂದ ಮೃತಪಟ್ಟರು ಎಂದು ತಿಳಿದುಬಂದಿದೆ.

ಈ ಕುರಿತು ಮಂಗಳೂರು ನಗರ ಪಶ್ಚಿಮ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.