- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಬಂಟ್ವಾಳ : ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Bantwal [1]

ಬಂಟ್ವಾಳ : ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಸಿದ್ದಕಟ್ಟೆ ಸಮೀಪದ ಕರ್ಪೆ ಮುಗೇರು ಎಂಬಲ್ಲಿ ನಡೆದಿದೆ.

ಮುಗೇರು ನಿವಾಸಿ ಅಭಯ್ ಜೈನ್ ಎಂಬವರ ಪತ್ನಿ ಪ್ರತಿಭಾ ಜೈನ್ (35) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಅಭಯ್ ಜೈನ್ ಮುಂಜಾನೆ 5 ಗಂಟೆಯ ವೇಳೆ ಹಾಸನದಲ್ಲಿ ನಡೆಯುವ ಸಂಬಂಧಿಕರ ಮದುವೆಗೆ ತೆರಳಿದ ಬಳಿಕ ಸುಮಾರು 6 ಗಂಟೆಯ ವೇಳೆ ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ಮೃತರು ಪತಿ, ಇಬ್ಬರು ಪುತ್ರರನ್ನು ಆಗಲಿದ್ದಾರೆ.

ತನ್ನ ಮಗಳ ಆತ್ಮಹತ್ಯಗೆ ಮಾವ ಭುಜಬಲಿ ಎಂಬವರೇ ಕಾರಣ ಎಂದು ಪ್ರತಿಭಾ ಅವರ ತಂದೆ, ಚಿಕ್ಕಮಗಳೂರು ನಿವಾಸಿ ಜಿನರಾಜಯ್ಯ ಅವರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ.

ಸ್ಥಳಕ್ಕೆ ಬಂಟ್ವಾಳ ವೃತ್ತ ನಿರೀಕ್ಷಕ ಟಿ. ಡಿ.ನಾಗರಾಜ್ ಗ್ರಾಮಾಂತರ ಪೊಲೀಸ್ ಠಾಣೆಯ ಎಸ್ಸೈ ಪ್ರಸನ್ನ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ.