ರೈತನ ಮೇಲೆ ಕಾಡಾನೆ ದಾಳಿ, ಟೈರ್‌ಗೆ ಬೆಂಕಿ ಹಚ್ಚಿ ಗ್ರಾಮಸ್ಥರು ಆಕ್ರೋಶ

8:01 PM, Thursday, November 28th, 2019
Share
1 Star2 Stars3 Stars4 Stars5 Stars
(No Ratings Yet)
Loading...

elephant-attackಮೈಸೂರು : ಜಮೀನಿಗೆ ತೆರಳಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ರೈತರೋರ್ವರು ಗಾಯಗೊಂಡ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಗುರುಪುರ ಗ್ರಾಮದಲ್ಲಿ ನಡೆದಿದೆ.

ಗಾಯಗೊಂಡ ರೈತರನ್ನು ರಾಘವೇಂದ್ರ(38 ) ಎಂದು ಗುರುತಿಸಲಾಗಿದ್ದು ಗುರುವಾರ ಬೆಳಿಗ್ಗೆ ಅವರು ಜಮೀನಿಗೆ ತೆರಳುವಾಗ ಏಕಾಏಕಿ ಕಾಡಾನೆಯೊಂದು ದಾಳಿ ಮಾಡಿದೆ. ಇದರಿಂದ ರಾಘವೇಂದ್ರ ಅವರ ಮುಖ ಹಾಗೂ ಸೊಂಟಕ್ಕೆ ಗಂಭೀರ ಗಾಯಗಳಾಗಿದೆ. ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಈ ಭಾಗದಲ್ಲಿ ಪದೇ ಪದೇ ಆನೆಗಳ ದಾಳಿಯ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದರೂ, ಅಧಿಕಾರಿಗಳು ಮಾತ್ರ ಕ್ರಮಕ್ಕೆ ಮುಂದಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಹಿನ್ನಲೆಯಲ್ಲಿ ಹುಣಸೂರು -ಹೆಚ್.ಡಿ.ಕೋಟೆ ರಸ್ತೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಗುರುಪುರ, ಗೌಡನಕಟ್ಟೆ, ಹೊಸೂರು ಸೇರಿದಂತೆ ಹಲವು ಗ್ರಾಮದವರು ರಸ್ತೆ ತಡೆ ನಡೆಸಿ, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸುವಂತೆ ಪಟ್ಟು ಹಿಡಿದು ಪ್ರತಿಭಟನೆ ನಡೆಸುತಿದ್ದಾರೆ. ನಂತರ ಸ್ಥಳಕ್ಕೆ ತೆರಳಿರುವ ಅರಣ್ಯಾಧಿಕಾರಿಗಳು ಗ್ರಾಮಸ್ಥರ ಮನವೊಲಿಕೆಯಲ್ಲಿ ತೊಡಗಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English