ಕುಂದಾಪುರ : ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ; ಮಾನಸಿಕ ಖಿನ್ನತೆಯೇ ಕಾರಣವಾಯ್ತು!

12:10 PM, Friday, November 29th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Kundapura

ಕುಂದಾಪುರ : ಕುಂದಾಪುರ ತಾಲೂಕು ಬೆಳ್ವೆ ಗ್ರಾಮದ ಸುರ್ಗೋಳಿ ಎಂಬಲ್ಲಿ ಸೂರ್ಯನಾರಾಯಣ ಅಲ್ಸೆ (52) ಎಂಬಾತ ತನ್ನ ಪತ್ನಿ ಮಾನಸ (38) ಮಕ್ಕಳಾದ ಸುಧೀಂದ್ರ (14) ಸುಧೀಶ್ (9) ಎನ್ನುವರನ್ನು ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.

15 ವರ್ಷಗಳ ಹಿಂದೆ ಮೈಸೂರು ಮೂಲದ ಮಾನಸಾರನ್ನು ವಿವಾಹವಾಗಿದ್ದ ಸೂರ್ಯನಾರಾಯಣ ಅವರಿಗೆ ಇಬ್ಬರು ಗಂಡುಮಕ್ಕಳಿದ್ದರು. ಇವರು ಅಡುಗೆ ಕೆಲಸ, ಕ್ಯಾಟರಿಂಗ್ ಮಾಡುತ್ತಿದ್ದರು. ಮನೆ ಸಮೀಪವೇ ಸುಮಾರು ಎರಡೂವರೆ ಎಕ್ರೆ ಜಾಗದಲ್ಲಿ ಅಡಿಕೆ ತೋಟವಿದೆ. ಇತ್ತೀಗಷ್ಟೇ ತೋಟದಲ್ಲಿ ಎರಡು ಕೆರೆ ತೋಡಿಸಿದ್ದರು. ಆರ್ಥಿಕ ಸಮಸ್ಯೆ ಇದ್ದಂತೆ ತೋರುತ್ತಿರಲಿಲ್ಲ. ಸಿಡುಕ ಹಾಗೂ ಕೋಪಿಷ್ಟ ನಾಗಿದ್ದ ಸೂರ್ಯನಾರಾಯಣ 5 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು. ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಈಚೆಗೆ 5 ತಿಂಗಳಿಂದ ಔಷಧ ತೆಗೆದುಕೊಳ್ಳುತ್ತಿರಲಿಲ್ಲ. ಅತಿರೇಕರ ವರ್ತನೆಯಿಂದ ಈ ಘಟನೆ ಸಂಭವಿಸಿರಬಹುದು ಎಂದು ಮೃತರ ಸಹೋದರ ದೂರಿನಲ್ಲಿ ತಿಳಿಸಿದ್ದಾರೆ.

ಮಣಿಪಾಲ ಆಸ್ಪತ್ರೆಯಲ್ಲಿ ಗುರುವಾರ ಶವ ಪರೀಕ್ಷೆ ನಡೆಸಿ 4 ಮೃತದೇಹಗಳನ್ನು ಕುಟುಂಬಿಕರಿಗೆ ಹಸ್ತಾಂತರಿಸಲಾಗಿದೆ. 2 ದಿನಗಳಲ್ಲಿ ಮರಣೋತ್ತರ ಪರೀಕ್ಷೆ ಪ್ರಾಥಮಿಕ ವರದಿ ಕೈ ಸೇರಿವ ನಿರೀಕ್ಷೆ ಇದೆ. ಕುಟುಂಬಿಕರೆಲ್ಲರೂ ಸೇರಿ ಗುರುವಾರವೇ ಅಂತ್ಯಸಂಸ್ಕಾರ ನಡೆಸಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English