15 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದೆ : ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ

3:11 PM, Friday, November 29th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Govinda-karajola

ಬೆಂಗಳೂರು : ಈಗಾಗಲೇ  12 ಕ್ಷೇತ್ರಗಳಲ್ಲಿ ಪ್ರಚಾರ ಮಾಡಿ ಬಂದಿದ್ದು, ಜನ ಬಿಜೆಪಿ ಪರ ಇದ್ದಾರೆ. 15 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ಯಾಕೆ ಅಷ್ಟೊಂದು ಭಯ ಶುರುವಾಗಿದೆ ಗೊತ್ತಿಲ್ಲ. ಸಿದ್ದರಾಮಯ್ಯ ಅವರು ಕೀಳು ಮಟ್ಟದ ಭಾಷೆ ಬಳಸಿದ್ದಾರೆ. ಇದರಿಂದ ಅವರ ಯೋಗ್ಯತೆಗೆ, ಘನತೆಗೆ ಕುಂದು ಬರುತ್ತದೆ. ಕೂಡಲೇ ಅವರು ಜನತೆಯ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.

ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಹೀಗೆ 5 ಗುಂಪಾಗಿದೆ. ಒಟ್ಟಿಗೆ ಯಾರೂ ಪ್ರಚಾರ ಮಾಡುತ್ತಿಲ್ಲ. ಡಿ.9 ನೇ ತಾರೀಖಿನ ನಂತರ ಕಾಂಗ್ರೆಸ್ ಅಡ್ರೆಸ್ ಸಿಗಲ್ಲ ಎಂದು ಹೇಳಿದರು.

ನಾನು 6 ಚುನಾವಣೆ ಎದುರಿಸಿದ್ದೇನೆ. ಇದುವರೆಗೂ ಯಾರಿಗೂ ಹಣ ಕೊಟ್ಟು ಚುನಾವಣೆ ಎದುರಿಸಿಲ್ಲ. ನನ್ನ ಕ್ಷೇತ್ರದಲ್ಲಿ ಒಬ್ಬರಿಗೆ ಹಣ ಹಂಚಿದ್ದೇನೆ ಎಂದರೆ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ ಎಂದು ಹೇಳಿದರು.

ಸಂಸದ ಎ. ನಾರಾಯಣಸ್ವಾಮಿ, ಶಾಸಕ ಎಂ.ಪಿ.ಕುಮಾರಸ್ವಾಮಿ ಉಪಸ್ಥಿತರಿದ್ದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English