ಮೀನುಗಾರಿಕೆಗೆ ತೆರಳಿದ ಮೀನುಗಾರನ ಆಕಸ್ಮಿಕ ಸಾವು

11:00 AM, Friday, October 26th, 2012
Share
1 Star2 Stars3 Stars4 Stars5 Stars
(No Ratings Yet)
Loading...

Malpe beachಉಡುಪಿ: ಬಡಾನಿಡಿಯೂರು ಕದಿಕೆಯ ಮಹಾಲಿಂಗ ಕುಂದರ್ ಎಂಬುವವರು ಗುರುವಾರ ಮಲ್ಪೆಯ ಸೈಂಟ್ ಮೇರೀಸ್ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ ಸಂದರ್ಭದಲ್ಲಿ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಸೀ ಮದರ್ ಎಂಬ ಬೋಟಿನಲ್ಲಿ ಕೆಲಸ ಮಾಡುತ್ತಿದ್ದ ಇವರು ಬಲೆ ಎಳೆಯುವ ಸಂದರ್ಭದಲ್ಲಿ ಜಾರಿ ದೋಣಿಯ ದಂಡೆಯ ಮೇಲೆ ಬಿದ್ದಿದ್ದಾರೆ. ಬೋಟಿನ ದಂಡೆಗೆ ಹಣೆಗೆ ತಾಗಿ ಅಲ್ಲಿಂದ ಸಮುದ್ರಕ್ಕೆ ಬಿದ್ದಿದ್ದಾರೆ. ಜೊತೆಯಲ್ಲಿದ್ದವರು ತಕ್ಷಣ ಅವರನ್ನು ಮೇಲೆತ್ತಿ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English