ಹೆಚ್.ಡಿ.ಕೋಟೆಯಲ್ಲಿ ಪೊಲೀಸ್‌ ಇನ್ಸ್‌ಪೆಕ್ಟರ್‌ ವಿರುದ್ಧ ಪ್ರತಿಭಟನೆ ನಡೆಸಿದ ಕಾರ್ಯಕರ್ತರು

4:02 PM, Thursday, December 5th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Mysuru

ಮೈಸೂರು : ಸ್ವಗ್ರಾಮದಲ್ಲಿ ಮತ ಚಲಾಯಿಸಲು ಬಂದ ಹೆಚ್.ಡಿ.ಕೋಟೆ ಶಾಸಕರನ್ನು ಪೊಲೀಸರು ತಡೆದರು ಎಂದು ಆರೋಪಿಸಿ ಶಾಸಕರ ಬೆಂಬಲಿಗರು ಪ್ರತಿಭಟನೆ ನಡೆಸಿದ ಘಟನೆ ಹುಣಸೂರು ತಾಲ್ಲೂಕಿನ ಹೊಸರಾಮನಹಳ್ಳಿಯಲ್ಲಿ ನಡೆದಿದೆ.

ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಅವರ ಸ್ವಗ್ರಾಮ ಹುಣಸೂರು ತಾಲೂಕಿನ ಹೊಸರಾಮನಹಳ್ಳಿ ಗ್ರಾಮಕ್ಕೆ ಆಗಮಿಸಿದ್ದಾರೆ. ಗ್ರಾಮದ ಮತಗಟ್ಟೆಗೆ ಆಗಮಿಸಿ ಹೊರ ಬರುತ್ತಿದ್ದಂತೆ, ಅಲ್ಲಿದ್ದ ಪೊಲೀಸ್ ಇನ್ಸ್ಪೆಕ್ಟರ್ ಶಾಸಕರನ್ನು ತಡೆದು ಪ್ರಶ್ನಿಸಿದ್ದಾರೆ. ಇದರಿಂದ ಕೆರಳಿದ ಶಾಸಕರು ಇನ್ಸ್ಪೆಕ್ಟರ್ ಜೊತೆ ಮಾತಿನ ಚಕಮಕಿ ನಡೆಸಿದರು. ಈ ಸಂದರ್ಭದಲ್ಲಿ ಅಲ್ಲಿಗೆ ಆಗಮಿಸಿದ ಶಾಸಕರ ಬೆಂಬಲಿಗರು ಇನ್ಸ್ಪೆಕ್ಟರ್ ವಿರುದ್ಧ ಕೋಪ ತಾಪ ತೋರಿಸಿದ್ದಾರೆ.

ಈ ವೇಳೆ ಮಾತನಾಡಿದ ಶಾಸಕ ಅನಿಲ್ ಚಿಕ್ಕಮಾದು, ಶಾಸಕರನ್ನೇ ತಡೆದು ಆಡಳಿತ ಪಕ್ಷ ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English