ಮಂಗಳೂರು : ಕುಂಜತ್ತಬೈಲ್​​​​ನಲ್ಲಿ‌ ಇಂಡಿಯನ್ ಕೋಸ್ಟ್‌ಗಾರ್ಡ್ ಅಧಿಕಾರಿ ನೇಣು ಬಿಗಿದು ಆತ್ಮಹತ್ಯೆ

11:40 AM, Friday, December 6th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Athmahatye

ಮಂಗಳೂರು : ಜೀವನದಲ್ಲಿ ಜಿಗುಪ್ಸೆಗೊಂಡ ಇಂಡಿಯನ್ ಕೋಸ್ಟ್‌ಗಾರ್ಡ್ ಅಧಿಕಾರಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕುಂಜತ್ತಬೈಲ್ನಲ್ಲಿ‌ ನಡೆದಿದೆ.

ಹರಿಯಾಣ ಮೂಲದ ಪ್ರಸ್ತುತ ಕುಂಜತ್ತ್‌ಬೈಲ್ನಲ್ಲಿ ವಾಸವಾಗಿರುವ ಪವನ್‌ಕುಮಾರ್ (40) ಆತ್ಮಹತ್ಯೆ ಮಾಡಿಕೊಂಡವರು. ಇಂಡಿಯನ್ ಕೋಸ್ಟ್‌ಗಾರ್ಡ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಪವನ್‌ ಕೌಟುಂಬಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡಿದ್ದಾರೆಂದು ತಿಳಿದು ಬಂದಿದೆ. ಕೆಲವು ದಿನಗಳಿಂದ ಕೆಲಸಕ್ಕೆ ರಜೆ ಹಾಕಿದ್ದ ಇವರು, ನಿನ್ನೆ ಬೆಳಗ್ಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದು, ಮೃತದೇಹದ ಮಹಜರು ನಡೆದ ಬಳಿಕ ಹರಿಯಾಣಕ್ಕೆ ಕಳುಹಿಸಿಕೊಡಲಾಗಿದೆ. ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English