ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಗಡಿಪಾರು ಮಾಡಬೇಕು

9:33 PM, Wednesday, December 11th, 2019
Share
1 Star2 Stars3 Stars4 Stars5 Stars
(No Ratings Yet)
Loading...

vhp-putturuಪುತ್ತೂರು: ಕೆಯ್ಯೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ವಿಎಚ್‍ಪಿ ಮತ್ತು ಬಜರಂಗದಳ ವತಿಯಿಂದ ಪುತ್ತೂರು ವಿಧಾನಸೌಧ ಮುಂಭಾಗದ ಮಂಗಳವಾರ  ಪ್ರತಿಭಟನೆ ನಡೆಯಿತು.

ವಿಶ್ವ ಹಿಂದೂ ಪರಿಷತ್ ಪುತ್ತೂರು ಪ್ರಖಂಡ ಅಧ್ಯಕ್ಷ ಜನಾರ್ದನ ಬೆಟ್ಟ ಮಾತನಾಡಿ, ಕೆಯ್ಯೂರು ಗ್ರಾಮದಲ್ಲಿ ಮನೆಗೆ ನುಗ್ಗಿ ಅಪ್ರಾಪ್ತ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗೆ ಉಗ್ರ ಶಿಕ್ಷೆ ನೀಡಬೇಕು. ಕಾನೂನು ಹಿಡಿತದಿಂದ ತಪ್ಪಿಸಿಕೊಳ್ಳುವ ಇಂತಹ ವ್ಯಕ್ತಿಗಳಿಗೆ ಗಡಿಪಾರಿನಂತಹ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ವಿಶ್ವಹಿಂದೂ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಸತೀಶ್ ಬಿ.ಎಸ್, ಬಜರಂಗದಳ ಪುತ್ತೂರು ಪ್ರಖಂಡದ ಅಧ್ಯಕ್ಷ ಹರೀಶ್ ಕುಮಾರ್ ದೋಳ್ಪಾಡಿ, ಸಾಪ್ತಾಹಿಕ ಪ್ರಮುಖ್ ವಿಶಾಖ್ ರೈ, ವಿಶ್ವಹಿಂದೂ ಪರಿಷತ್ ಕೆಯ್ಯೂರು ಘಟಕದ ಅಧ್ಯಕ್ಷ ಚರಣ್ ಸಣಂಗಲ, ಬಜರಂಗದಳ ಕೆಯ್ಯೂರು ಘಟಕದ ಉದಯ ಕೆಯ್ಯೂರು, ಸಂತೋಷ್ ಬೆಟ್ಟಂಪಾಡಿ ಮತ್ತಿತರರು ಭಾಗವಹಿಸಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English