ಮೈಸೂರು : ವಿದ್ಯುತ್ ತಂತಿಗೆ ಸಿಲುಕಿ ಚಿರತೆ ಸಾವು

2:01 PM, Thursday, December 12th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

mysuru

ಮೈಸೂರು : ವಿದ್ಯುತ್ ತಂತಿಗೆ ಸಿಲುಕಿ ಚಿರತೆಯೊಂದು ಸಾವನ್ನಪ್ಪಿದ ಘಟನೆ ಹೆಚ್.ಡಿ.ಕೋಟೆ ತಾಲೂಕು ಜೀರಿಯಾ ಬಳಿ ಬುಧವಾರ ರಾತ್ರಿ ನಡೆದಿದೆ.

ಮೈಸೂರು ಜಿಲ್ಲೆ ಹೆಚ್.ಡಿ‌.ಕೋಟೆ ತಾಲೂಕಿನ ಜೀರಿಯಾ ಗ್ರಾಮದಲ್ಲಿ ರೈತರೊಬ್ಬರು ಅಕ್ರಮವಾಗಿ ನೀರಿನ ಪಂಪ್ ಸೆಟ್ ಗೆ ವಿದ್ಯುತ್ ತಂತಿ ಸಂಪರ್ಕ ಕಲ್ಪಿಸಿದ್ದರು ಎನ್ನಲಾಗಿದೆ.

ಆಹಾರವನ್ನು ಅರಸಿ ನಾಡಿಗೆ ಬಂದಿರುವ ಚಿರತೆಯೊಂದು ಬಾಯಿಯಲ್ಲಿ ವಿದ್ಯುತ್ ತಂತಿಯನ್ನು ಕಚ್ಚಿಕೊಂಡಿರುವ ಸ್ಥಿತಿಯಲ್ಲಿಯೇ ಜೋತಾಡುತ್ತಾ ಅಸು ನೀಗಿದೆ. ಸುದ್ದಿ ತಿಳಿಯುತಿದ್ದಂತೆಯೇ ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.

mysuru

ನಾಗರಹೊಳೆ‌ ರಾಷ್ಟ್ರೀಯ ಉದ್ಯಾನವನದ ಅಂತರಸಂತೆ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು 4ವರ್ಷ ಪ್ರಾಯದ್ದೆನ್ನಲಾದ ಚಿರತೆಯ ಶವ ಪರೀಕ್ಷೆ ನಡೆಸಲಾಗಿದೆ. ಮೊಕದ್ದಮೆ ದಾಖಲಿಸಿಕೊಂಡಿರುವ ಅರಣ್ಯಾಧಿಕಾರಿಗಳು ಮುಂದಿನ ತನಿಖೆ ನಡೆಸುತಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English