ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜಪ್ಪಿನಮೊಗರು ವಾರ್ಡಿನ ನಾಯಕ್ ಹಿತ್ಲು ಬಳಿ 7 ಲಕ್ಷ ರೂಪಾಯಿ ವೆಚ್ಚದಲ್ಲಿ ನಜೆಯುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು.
ಈ ಬಗ್ಗೆ ಮಾತನಾಡಿರುವ ಅವರು, ಕಳೆದ ಒಂದೂವರೆ ವರ್ಷಗಳಿಂದ ಜಪ್ಪಿನಮೊಗರು ವಾರ್ಡಿನ ಸಮಗ್ರ ಅಭಿವೃದ್ಧಿಯ ಕುರಿತು ಹೆಚ್ಚಿನ ಗಮನ ಹರಿಸಿದ್ದು, ಈಗಾಗಲೇ ವಿವಿಧ ಕಾಮಗಾರಿಗಳಿಗೆ ವಿಶೇಷ ಅನುದಾನ ಒದಗಿಸಲಾಗಿದೆ.
ನಾಯಕ್ ಹಿತ್ಲು ಪರಿಸರದ ಸಾರ್ವಜನಿಕರು ಹಾಗೂ ಸ್ಥಳೀಯ ಮುಖಂಡರು ಈ ಹಿಂದೆ ಇಲ್ಲಿನ ರಸ್ತೆ ಅಭಿವೃದ್ಧಿಯ ಕುರಿತು ನನ್ನಲ್ಲಿ ಕೇಳಿಕೊಂಡಿದ್ದರು. ಹಾಗಾಗಿ 7 ಲಕ್ಷ ರೂಪಾಯಿ ಅನುದಾನ ಒದಗಿಸಿದ್ದು ಒಳ ಚರಂಡಿಯೂ ಸೇರಿದಂತೆ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯಲಿದೆ ಎಂದಿದ್ದಾರೆ.
ರಸ್ತೆ ನಿರ್ಮಾಣದ ಕಾಮಗಾರಿ ನಡೆಸುವ ಮೊದಲು ಸೂಕ್ತವಾದ ಚರಂಡಿ ನಿರ್ಮಿಸಿದ ನಂತರವೇ ರಸ್ತೆ ಕಾಮಗಾರಿ ಪ್ರಾರಂಭವಾಗಲಿದೆ. ಕಾಮಗಾರಿ ನಡೆಯುವ ಸಂಧರ್ಭದಲ್ಲಿ ಆ ಪರಿಸರದ ಜನರಿಗೆ ಒಂದಷ್ಟು ತೊಂದರೆಯಾಗಬಹುದು, ಆದರೆ ಶೀಘ್ರವೇ ಕಾಮಗಾರಿ ಪೂರ್ಣಗೊಳಿಸುವ ಭರವಸೆ ನೀಡುತ್ತೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ತಿಳಿಸಿದ್ದಾರೆ.
ಈ ಸಂಧರ್ಭದಲ್ಲಿ ಪಾಲಿಕೆ ಸದಸ್ಯರಾದ ವೀಣಾ ಮಂಗಳ, ಬಿಜೆಪಿ ಮುಖಂಡರಾದ ಸಂದೇಶ್ ಶೆಟ್ಟಿ,ವಸಂತ್ ಜೆ ಪೂಜಾರಿ, ಶುಭಕರ್ ಶೆಟ್ಟಿ, ಸಿಪ್ರಿನ್, ಪುಷ್ಪರಾಜ್, ದೀಪಕ್, ಸ್ನೇಹಾ, ಸವಿತಾ ಶೆಟ್ಟಿ, ರಾಘವೇಂದ್ರ, ಕೀರ್ತಿರಾಜ್, ನಿತೇಶ್, ಪ್ರೇಮಾ, ನಾಗರಾಜ್, ಪ್ರಾಣೇಶ್, ಲೋಹಿತ್ ಶೆಟ್ಟಿ, ಲೀಲಾವತಿ, ಮಾಧವ್ ಆಳ್ವಾ, ಲೋಹಿತ್,ಹರೀಶ್, ಕಿಶೋರ್, ಮಹಾಬಲ ರೈ, ಸುಶ್ಮಿತಾ, ತೃಪ್ತಿ, ಪ್ರಮೋದ್, ಅನಿಲ್, ಮೀನಾಕ್ಷಿ ಹಾಗೂ ಇನ್ನಿತರ ಮುಖಂಡರು ಭಾಗವಹಿಸಿದ್ದರು.
Click this button or press Ctrl+G to toggle between Kannada and English