ಬಸ್, ಸ್ಕೂಟರ್ ನಡುವೆ ಡಿಕ್ಕಿ : ಮಗು ಸ್ಥಳದಲ್ಲೇ ಸಾವು

9:29 AM, Tuesday, December 17th, 2019
Share
1 Star2 Stars3 Stars4 Stars5 Stars
(No Ratings Yet)
Loading...

Pratwi

ಮಡಿಕೇರಿ : ಕೆಎಸ್ ಆರ್ ಟಿಸಿ ಬಸ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಮೂರು ವರ್ಷದ ಗಂಡು ಮಗುವೊಂದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಶಾಲನಗರ ಸಮೀಪ ಬೈಚೇನಹಳ್ಳಿಯಲ್ಲಿ ನಡೆದಿದೆ.

ಗೊಂದಿಬಸವನಹಳ್ಳಿ ನಿವಾಸಿಗಳಾದ ಪರಮೇಶ್ವರ ಹಾಗೂ ಗೀತಾ ದಂಪತಿಗಳ ಪುತ್ರ ಪ್ರಥ್ವಿ (3) ಮೃತ ದುರ್ದೈವಿ.

Pratwi

ಮಡಿಕೇರಿಯಿಂದ ಕುಶಾಲನಗರ ಕಡೆಗೆ ಬರುತ್ತಿದ್ದ ಬಸ್ ದೇವಾಲಯದಿಂದ ಮರಳುತ್ತಿದ್ದ ಸ್ಕೂಟರ್ ಗೆ ಡಿಕ್ಕಿಯಾದ ಪರಿಣಾಮ ಸ್ಕೂಟರ್ ನಲ್ಲಿದ್ದ ಪ್ರಥ್ವಿ ಮೇಲೆ ಬಸ್ ಚಕ್ರ ಹರಿದು ಸಾವು ಸಂಭವಿಸಿದೆ. ಕುಶಾಲನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English