ಬೆಂಗಳೂರಿನ ರೌಡಿಶೀಟರ್ ಬರ್ಬರ ಹತ್ಯೆ : ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

11:25 AM, Tuesday, December 17th, 2019
Share
1 Star2 Stars3 Stars4 Stars5 Stars
(No Ratings Yet)
Loading...

bharath

ಬೆಂಗಳೂರು : ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಮತ್ತೆ ಲಾಂಗು-ಮಚ್ಚುಗಳು ಝಳಪಿಸಿವೆ. ಹಲವರು ರೌಡಿಶೀಟರ್ ಭರತ್ ಅಲಿಯಾಸ್ ಕೋಗಿಲು ಭರತ್ ಎಂಬ ರೌಡಿಶೀಟರ್ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಕೆಲವು ಕೊಲೆ ಪ್ರಕರಣಗಳಲ್ಲಿ ಸಿಕ್ಕಿಬಿದ್ದಿದ್ದ ಭರತ್ ಎಂಬ ರೌಡಿಶೀಟರ್ ಸೋಮವಾರ ರಾತ್ರಿ ಸಂಪಿಗೆಹಳ್ಳಿಯ ಬಾರ್ನ ಎದುರು ಕೊಲೆಯಾಗಿದ್ದಾನೆ. ಸಂಪಿಗೆಹಳ್ಳಿಯ ಚೌಡೇಶ್ವರಿ ಬಾರ್ ಮುಂಭಾಗದಲ್ಲಿ ಭರತ್ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಭರತ್ ವಿರುದ್ಧ ಯಲಹಂಕ, ಸಂಪಿಗೆಹಳ್ಳಿ ಠಾಣೆಗಳಲ್ಲಿ ಕೇಸ್ ದಾಖಲಾಗಿದ್ದವು. ನಿನ್ನೆ ರಾತ್ರಿ 9.30ರ ಸುಮಾರಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಆತನನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದು, ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲೆಗೆ ಹಳೆಯ ದ್ವೇಷ ಅಥವಾ ಕುಡಿತದ ಅಮಲಿನಲ್ಲಿ ನಡೆದ ಗಲಾಟೆ ಕಾರಣ ಇರಬಹುದು ಎನ್ನಲಾಗುತ್ತಿದೆ. ಹತ್ಯೆಗೆ ನಿಖರ ಕಾರಣವೇನೆಂಬುದು ತನಿಖೆಯ ಬಳಿಕ ಗೊತ್ತಾಗಲಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English