ಕಡಬ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ ನೇಮಕ

10:55 AM, Thursday, December 19th, 2019
Share
1 Star2 Stars3 Stars4 Stars5 Stars
(No Ratings Yet)
Loading...

Janardhana-gowda

ಕಡಬ : ನಿವೃತ್ತ ಶಿಕ್ಷಕ, ಧಾರ್ಮಿಕ, ಸಾಮಾಜಿಕ ಹಾಗೂ ಸಾಹಿತ್ಯಿಕ ಕ್ಷೇತ್ರದಲ್ಲಿ ಸಕ್ರಿಯರೂ ಆಗಿರುವ ಪಿ. ಜನಾರ್ದನಗೌಡ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಕಡಬ ತಾಲೂಕು ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಶ್ರೀಯುತರು ಕಡಬ ತಾಲೂಕಿನ ವಿವಿಧ ಶಾಲೆಗಳಲ್ಲಿ ಅಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿ ಮುಖ್ಯೋಪಧ್ಯಾಯರಾಗಿ ಪದೋನ್ನತಿ ಹೊಂದಿ ನಿವೃತ್ತರಾದರು. ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದ ಜನಾರ್ದನ ಗೌಡರು ಅನೇಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿರುವರು.

ಈ ಹಿಂದೆಜರಗಿದ್ದ ಪುತ್ತೂರು ತಾಲೂಕು 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಕಾರ್ಯದರ್ಶಿಯಾಗಿ ಹಾಗೂ ಪುತ್ತೂರು ತಾಲೂಕು 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಗೌರವಾಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿರುವ ಜನಾರ್ದನ ಗೌಡರನ್ನು ಕಡಬ ತಾಲೂಕುಕನ್ನಡ ಸಾಹಿತ್ಯ ಪರಿಷತ್ತಿನ ಘಟಕಾಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English