- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಬೆಂಗಳೂರಿನಿಂದ ಮಂಗಳೂರಿಗೆ ಬಂದಿದ್ದ ಕಾಂಗ್ರೆಸ್ ನ ಮುಖಂಡರ ಬಂಧನ

Ugrappa [1]ಮಂಗಳೂರು: ಹಿಂಸಾಚಾರ ಕ್ಕೆ ಬಲಿಯಾದ ಇಬ್ಬರ ಕುಟುಂಬಕ್ಕೆ ಸಾಂತ್ವನ ಹೇಳಲು ಬಂದಿದ್ದ ಕಾಂಗ್ರೆಸ್ ನ ಮುಖಂಡರನ್ನು ಬಜ್ಪೆ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ಧಾರೆ.

ಕಾಂಗ್ರೆಸ್ ನಾಯಕರಾದ ಎಂ ಬಿ ಪಾಟೀಲ್, ಎಸ್ ಆರ್ ಪಾಟೀಲ್, ವಿ ಎಸ್ ಉಗ್ರಪ್ಪ, ರಮೇಶ್ ಕುಮಾರ್, ಬಸವರಾಜರಾಯ ರೆಡ್ಡಿ ಸೇರಿದಂತೆ ಆರು ಮಂದಿಯ ಕಾಂಗ್ರೆಸ್ ನಿಯೋಗವನ್ನು ಬಜಪೆ ವಿಮಾನನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರಿನಲ್ಲಿ ಕರ್ಫ್ಯೂ ಜಾರಿಯಲ್ಲಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ನಿಯೋಗವನ್ನು ಪೊಲೀಸರು ವಿಮಾನ ನಿಲ್ದಾಣದಲ್ಲಿಯೇ ತಡೆದಿದ್ದಾರೆ ಎನ್ನಲಾಗಿದೆ.