[1]ಮಂಗಳೂರು : ಯು.ಟಿ.ಖಾದರ್ ಅವರ ಬೆಂಕಿ ಹಚ್ಚುವ ಹೇಳಿಕೆಯಿಂದ ಮಂಗಳೂರು ಗಲಭೆ ಉಂಟಾಗಲು ಕಾರಣವಾಗಿದೆ ಎಂದು ಕೇಂದ್ರ ಡಿ.ವಿ.ಸದಾನಂದಗೌಡ ಹೇಳಿದರು.
ಕಾಂಗ್ರೆಸ್ ಹಾಗೂ ಯು.ಟಿ.ಖಾದರ್ ಅವರು ತಮ್ಮ ಅಸ್ತಿತ್ವಕ್ಕಾಗಿ ಇಂತವರನ್ನು ಸಣ್ಣ ಪುಟ್ಟ ಗಲಾಟೆಯಾದರೂ ಕರೆಸಿಕೊಳ್ಳುತ್ತಾರೆ ಎಂದರು.
ಪಾಕಿಸ್ತಾನ, ಅಪ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ಮೂರು ಇಸ್ಲಾಮಿಕ್ ರಾಷ್ಟ್ರಗಳು, ಆದರೆ ಭಾರತ ಮಾತ್ರ ಸರ್ವ ಧರ್ಮಗಳ ರಾಷ್ಟ್ರವಾಗಿದೆ ಎಂದು ತಿಳಿಸಿದರು.
1971 ರ ಯುದ್ದದ ಬಳಿಕ ಪಾಕಿಸ್ತಾನದಲ್ಲಿ ಹಿಂದೂಗಳ ಮಾರಣಹೋಮ ನಡೆದುಹೋಯಿತು, ಅನೇಕ ಹಿಂದೂಗಳು ನಿರಾಶ್ರಿತರಾದರು ಭಾರತ ಅಂತವರಿಗೆ ಆಶ್ರಯ ನೀಡುತ್ತಿದೆ ಎಂದರು. ಪೌರತ್ವ ಕಾಯ್ದೆಯಡಿ ಯಾವೊಬ್ಬ ಮುಸಲ್ಮಾನ್ ಸೇರಿದಂತೆ ಯಾವ ಧರ್ಮದವರಿಗೂ ತೊಂದರೆಯಾಗಲ್ಲ, ಇದು ಯಾವುದೇ ಜಾತಿ, ಮತಕ್ಕೆ ಸೀಮಿತವಾಗಿಲ್ಲ, ಇದೊಂದು ಮಾನವೀಯತೆಯ ತಿದ್ದುಪಡಿಯಾಗಿದೆ ಎಂದರು. ಇದೇ ಸಂದರ್ಭದಲ್ಲಿ ಪೇಜಾವರ ಶ್ರೀ ಆಸ್ಪತ್ರೆಗೆ ಸೇರಿರುವ ಬಗ್ಗೆ ಮಾತನಾಡಿದ ಸಚಿವರು, ಎಲ್ಲ ಧರ್ಮದ ಜನರನ್ನು ಸಮಾನವಾಗಿ ಕಾಣುವ ಶ್ರೀಗಳ ಆರೋಗ್ಯ ಬೇಗ ಸುಧಾರಿಸಲಿ ಅವರಿಂದ ಇನ್ನಷ್ಟು ಧಾರ್ಮಿಕ ಕಾರ್ಯಗಳು ನಡೆಯುವಂತಾಗಲಿ ಎಂದು ಆಶೀಸಿದರು.