ಬಂಟ್ವಾಳ : ದೇವಸ್ಥಾನದಲ್ಲಿ ನಗದು ಕಳವು; ಸಿಸಿ ಕ್ಯಾಮರಾದಲ್ಲಿ ಕಳ್ಳರ ಚಲನವಲನ ಸೆರೆ

2:49 PM, Thursday, December 26th, 2019
Share
1 Star2 Stars3 Stars4 Stars5 Stars
(No Ratings Yet)
Loading...

veeara-bhadra-temple

ಬಂಟ್ವಾಳ : ಬಂಟ್ವಾಳ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದಕಟ್ಟೆಯ ಸಂಗಬೆಟ್ಟುನಲ್ಲಿರುವ, ಪಣಂಬೂರು ಶ್ರೀ ವೀರಭದ್ರ ಮಹಾಮ್ಮಾಯಿ ದೇವಸ್ಥಾನಕ್ಕೆ ಕಳ್ಳರು ನುಗ್ಗಿದ್ದು, ದೇವಸ್ಥಾನದ ಒಳಗಿರುವ ಕಾಣಿಕೆ ಡಬ್ಬಿ ಕೊಂಡೊಯ್ದ ಘಟನೆ ಸಂಭವಿಸಿದೆ.

ಡಿ.25 ರ ಮಧ್ಯರಾತ್ರಿ 2.30 ವೇಳೆ ಘಟನೆ ಸಂಭವಿಸಿದ್ದು, ಕಳ್ಳರ ಚಲನ ವಲನ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ.

ಇಬ್ಬರು ವ್ಯಕ್ತಿಗಳು ದೇವಸ್ಥಾನಕ್ಕೆ ಒಳಗೆ ನುಗ್ಗಿದ ಚಿತ್ರ ಸಿ.ಸಿ.ಕ್ಯಾಮಾರದಲ್ಲಿ ಸೆರೆಯಾಗಿದೆ.

ಶ್ರೀ ವೀರಭದ್ರ ಹಾಗೂ ಮಹಾಮ್ಮಾಯಿ ದೇವಸ್ಥಾನದ ನವೀಕರಣಗೊಂಡು ಇತ್ತೀಚಿಗೆ ಪುನಃಪ್ರತಿಷ್ಠೆ ಬ್ರಹ್ಮಕಲಶೋತ್ಸವ ನಡೆದಿತ್ತು.‌

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English