ನೆಲ್ಯಾಡಿ: ಜೀಪ್ ಹಾಗೂ ಕಂಟೇನರ್ ಡಿಕ್ಕಿ, ಜೀಪು ಚಾಲಕ ಮೃತ್ಯು

2:19 PM, Monday, December 30th, 2019
Share
1 Star2 Stars3 Stars4 Stars5 Stars
(No Ratings Yet)
Loading...

jeep-accidentಉಪ್ಪಿನಂಗಡಿ : ಜೀಪ್ ಹಾಗೂ ಕಂಟೇನರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ವ್ಯಕ್ತಿ ಮೃತಪಟ್ಟು, ಆರು ಜನರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ಬೆದ್ರೋಡಿ ಎಂಬಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ.

ಮೃತ ಚಾಲಕನನ್ನು ನೆಲ್ಯಾಡಿ ನಿವಾಸಿ ಸಿದ್ದೀಕ್ ಎಂದು ಗುರುತಿಸಲಾಗಿದೆ.

ನೆಲ್ಯಾಡಿಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಜೀಪ್ ಹಾಗೂ ಕಂಟೇನರ್ ನಡುವೆ ಬೆದ್ರೋಡಿಯಲ್ಲಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಜೀಪಿನಲ್ಲಿದ್ದ ಏಳು ಮಂದಿ ಪ್ರಯಾಣಿಕರು ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುತ್ತದ್ದ ಸಂದರ್ಭದಲ್ಲಿ ಮಾರ್ಗ ಮಧ್ಯೆ ಚಾಲಕ ಮೃತಪಟ್ಟಿದ್ದಾರೆ. ಮೃತದೇಹವನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಪುತ್ತೂರು ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English