ಮಂಗಳೂರು : ಪಂಪ್​ವೆಲ್​ ಮೇಲ್ಸೇತುವೆ ಕಾಮಗಾರಿ; ಟೋಲ್​​ ಗೇಟ್ ಬಂದ್​ ಮಾಡಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

12:25 PM, Wednesday, January 1st, 2020
Share
1 Star2 Stars3 Stars4 Stars5 Stars
(5 rating, 1 votes)
Loading...

tollgate

ಮಂಗಳೂರು : ಪಂಪ್ವೆಲ್ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಕಾಮಗಾರಿ ಗುತ್ತಿಗೆ ಪಡೆದಿರುವ ನವಯುಗ ಸಂಸ್ಥೆ ವಿರುದ್ಧ ಬಿಜೆಪಿ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿ ನೇತೃತ್ವದಲ್ಲಿ ತಲಪಾಡಿಯ ಟೋಲ್ ಗೇಟ್ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.

toll-gate

ತಲಪಾಡಿಯಲ್ಲಿರುವ ನವಯುಗ ಉಡುಪಿ ಪ್ರೈವೇಟ್ ಲಿಮಿಟೆಡ್ನ ಟೋಲ್ ಗೇಟ್ ಅನ್ನು ಬಿಜೆಪಿ ಕಾರ್ಯಕರ್ತರು ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಜನವರಿ 1ಕ್ಕೆ ಈ ಸೇತುವೆ ಉದ್ಘಾಟನೆ ಆಗಲಿದೆ ಎಂದು ಸಂಸ್ಥೆ ಮಾತು ಕೊಟ್ಟಿತ್ತು. ಆದರೆ, ಇನ್ನೂ ಸಹ ಕಾಮಗಾರಿಯನ್ನು ಪೂರ್ಣಗೊಳಿಸಿಲ್ಲ. ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

toll-gate

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ನಿನ್ನೆ ತಲಪಾಡಿ ಟೋಲ್ ಗೇಟ್ ಅನ್ನು ಒಂದು ತಿಂಗಳು ಬಂದ್ ಮಾಡುವ ಎಚ್ಚರಿಕೆ ನೀಡಿದ್ದರು. ಆದರೆ, ಇಂದು ಬಿಜೆಪಿ ಕಾರ್ಯಕರ್ತರು ಸಾಂಕೇತಿಕವಾಗಿ ಒಂದು ದಿನ ಬಂದ್ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ಅವರು, ಜನವರಿ 31ರೊಳಗೆ ಕಾಮಗಾರಿ ಪೂರ್ಣಗೊಳ್ಳದಿದ್ದರೆ, ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇಂದು ಸಂಜೆ 6 ಗಂಟೆಯವರೆಗೆ ಟೋಲ್ ಗೇಟ್ ಬಂದ್ ಇರಲಿದೆ. ವಾಹನಗಳಿಂದ ಯಾವುದೇ ಸುಂಕ ಸಂಗ್ರಹಿಸಲಾಗುತ್ತಿಲ್ಲ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English