ತುಮಕೂರು : ಓಮ್ನಿ ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಸಜೀವ ದಹನಗೊಂಡಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ದೊಡ್ಡಗುಣಿ ಬಳಿ ನಡೆದಿದೆ.
ದೊಡ್ಡಗುಣಿ ಕೆರೆ ಏರಿ ಮೇಲೆ ಬಸ್ ಮತ್ತು ಕಾರು ಮುಖಾಮುಖಿಯಾಗಿವೆ. ಡಿಕ್ಕಿಯಾದ ರಭಸಕ್ಕೆ ಬಸ್ ಮತ್ತು ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರಿನಲ್ಲಿದ್ದ ಮೂರು ಮಂದಿ ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾರೆ. ಬಸ್ ಮತ್ತು ಕಾರು ಸಂಪೂರ್ಣ ಬೆಂಕಿಗಾಹುತಿಯಾಗಿವೆ.
ಮೃತರನ್ನು ವಸಂತ್ಕುಮಾರ್(45), ನರಸಮ್ಮ(60), ರಾಮಯ್ಯ(55) ಎಂದು ಗುರುತಿಸಲಾಗಿದೆ. ನಾಲ್ವರಿಗೆ ಗಂಭೀರ ಗಾಯವಾಗಿದ್ದು, ತುಮಕೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಬಸ್ ಬೆಂಗಳೂರಿಂದ ಶಿವಮೊಗ್ಗ ಕಡೆಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ 40 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗುಬ್ಬಿ ಸರ್ಕಲ್ ಇನ್ಸ್ಪೆಕ್ಟರ್ ದೀಪಕ್ ಹೆಗ್ಡೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.