ಶಾಸಕ ಅಪ್ಪಚ್ಚು ರಂಜನ್ ನಗರ ಸಂಚಾರ : ಗುಣಮಟ್ಟದ ಕಾಮಗಾರಿಗೆ ಸೂಚನೆ

12:49 PM, Saturday, January 4th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

road

ಮಡಿಕೇರಿ : ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ನಗರ ಸಂಚಾರ ನಡೆಸಿ ನಗರ ಸಭೆಯಿಂದ ಕೈಗೆತ್ತಿಕೊಳ್ಳಲಾಗಿರುವ ಕಾಮಗಾರಿಗಳನ್ನು ಪರಿಶೀಲಿಸಿದರು. ನಗರೋತ್ಥಾನ ಯೋಜನೆಯಡಿ ಕೈಗೊಳ್ಳಲಾಗಿರುವ ಕಾಮಗಾರಿಗಳ ಬಗ್ಗೆ ನಗರಸಭಾ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು ಗುಣಮಟ್ಟದ ಕಾಮಗಾರಿ ನಡೆಸುವಂತೆ ಸೂಚನೆ ನೀಡಿದರು.

road

ನಗರದ ಇಂದಿರಾಗಾಂಧಿ ವೃತ್ತದಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕಾಗಿ ನಡೆಯುತ್ತಿರುವ ಕಾಮಗಾರಿ ಬಗ್ಗೆ ಮಾಹಿತಿ ಪಡೆದರು. ಖಾಸಗಿ ಬಸ್ ನಿಲ್ದಾಣದ ಬಳಿ ಪ್ರಯಾಣಿಕರ ತಂಗುದಾಣ ನಿರ್ಮಾಣ, ವಿದ್ಯಾನಗರದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಶಾಸಕರು ಪರಿಶೀಲಿಸಿದರು. ಒಳಚರಂಡಿ ಮಂಡಳಿ ಎಂಜಿನಿಯರ್, ನಗರಸಭೆ ಎಂಜಿನಿಯರ್ ವನಿತಾ ಇತರರು ಹಾಜರಿದ್ದರು.

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English