ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಕ್ರಮಕ್ಕೆ ಮನ್ಸೂರ್ ಅಲಿ ಒತ್ತಾಯ

9:52 AM, Tuesday, January 7th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Manzoor-Ali

ಮಡಿಕೇರಿ : ಮುಸಲ್ಮಾರ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿರುವ ಶಾಸಕ ಸೋಮಶೇಖರ್ ರೆಡ್ಡಿ ಅವರು ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಸಮಾಜದಲ್ಲಿ ಒಡಕು ಮೂಡಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿರುವ ಜಾತ್ಯತೀತ ಜನತಾದಳದ ಜಿಲ್ಲಾ ಮುಖಂಡ ಮನ್ಸೂರ್ ಅಲಿ, ಸೂಕ್ತ ಕ್ರಮಕ್ಕಾಗಿ ಆಗ್ರಹಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ದೇಶದ ಸಂವಿಧಾನದ ಆಶಯದಂತೆ ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಜನರಿಂದ ಆಯ್ಕೆಯಾಗಿ ಬಂದಿರುವ ಶಾಸಕರು ಬೇಜವಬ್ದಾರಿ ವರ್ತನೆ ತೋರಿದ್ದಾರೆ ಎಂದು ಟೀಕಿಸಿದ್ದಾರೆ. ಒಗ್ಗಟ್ಟಿನ ಸಮಾಜದಲ್ಲಿ ಅಶಾಂತಿ ಮೂಡಿಸಿ ರಾಜಕೀಯ ಲಾಭ ಪಡೆಯಲು ಹವಣಿಸಿದ ಶಾಸಕ ಸೋಮಶೇಖರ್ ರೆಡ್ಡಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಭೀತಿ ಮೂಡಿಸುವ ವಾತಾವರಣ ಸೃಷ್ಟಿಸುವ ಚಾಳಿಯನ್ನು ಬಿಟ್ಟು ಶಾಂತಿಯ ಸಮಾಜವನ್ನು ಕಟ್ಟುವ ಕಾರ್ಯವನ್ನು ಶಾಸಕರು ಮಾಡಲಿ ಎಂದು ಮನ್ಸೂರ್ ಅಲಿ ಹೇಳಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English