ಟಿಪ್ಪರ್ ಲಾರಿ ಬ್ಯಾಟರಿ ಕಳವು : ಆರೋಪಿ ಬಂಧನ

9:59 AM, Wednesday, January 8th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

harish

ಮಂಗಳೂರು: ಟಿಪ್ಪರ್ನಿಂದ ಬ್ಯಾಟರಿ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.

ಮೂಡಬಿದಿರೆ ತಾಲೂಕಿನ ಪುಚ್ಚಮುಗೇರು ನಿವಾಸಿ ಹರೀಶ್ ಪೂಜಾರಿ (40) ಬಂಧಿತ ಆರೋಪಿ. ಬಂಟ್ವಾಳದ ಪಂಜಿಕಲ್ಲು ನಿವಾಸಿ ರಾಮಚಂದ್ರ ಕುಲಾಲ್ ಎಂಬವರು ಕೊಯಿಲ ಗ್ರಾಮದಲ್ಲಿ ನಿಲ್ಲಿಸಿದ್ದ ಟಿಪ್ಪರ್ನಿಂದ ಬ್ಯಾಟರಿ ಕಳವು ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಪರ್ ಮಾಲೀಕರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಹರೀಶ್ ಪೂಜಾರಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆತನ ಬಳಿ ಕಳವಾದ ಬ್ಯಾಟರಿ ಪತ್ತೆಯಾಗಿದೆ. ಆರೋಪಿಯಿಂದ ಬೈಕ್ ಒಂದನ್ನು ವಶಪಡಿಸಿಕೊಂಡಿದ್ದು, ಅದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಬಳಿ ಕಳವು ಮಾಡಿರುವುದಾಗಿ ತಿಳಿದುಬಂದಿದೆ.

ಆರೋಪಿಯು ಬೇರೆ ಕಡೆಗಳಲ್ಲಿಯೂ ಕಳ್ಳತನ ಮಾಡಿರುವ ಬಗ್ಗೆ ಮಾಹಿತಿ ಇದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English