ಮಂಗಳೂರು : ಮಾಜಿ ಕೇಂದ್ರದ ಸಚಿವ ಹಾಗೂ ರಾಜ್ಯಸಭಾ ಸದಸ್ಯರಾದ ಶ್ರೀ ಆಸ್ಕರ್ ಫೆರ್ನಾಂಡಿಸ್ ರವರು ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದು, ಅವರು ಶೀಘ್ರವೇ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥನೆ ಹಾಗೂ ವಿಶೇಷ ಪೂಜೆಯನ್ನು ಮಾಜಿ ಕೇಂದ್ರ ಸಚಿವರಾದ ಶ್ರೀ ಬಿ. ಜನಾರ್ಧನ ಪೂಜಾರಿಯವರ ನೇತೃತ್ವದಲ್ಲಿ 11.1.2020 ರಂದು ಬೆಳಿಗ್ಗೆ 11.00 ಘಂಟೆಗೆ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯಿತು,
ಹಾಗೂ ಮಧ್ಯಾಹ್ನ 12.00 ಘಂಟೆಗೆ ರೊಸಾರಿಯೋ ಚರ್ಚ್ ನಲ್ಲಿ ಕೂಡಾ ಪ್ರಾರ್ಥನೆ ನಡೆಯಿತು. ಈ ಸಂದರ್ಭ ಮಾಜಿ ಶಾಸಕರಾದ ವಿಜಯ ಕುಮಾರ್ ಶೆಟ್ಟಿ, ಜೆ.ಆರ್. ಲೋಬೊ, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ ರೋಸಾರಿಯೋ ಚರ್ಚ್ ಧರ್ಮಗುರು ಗಳು, ಪುರುಷೋತ್ತಮ ಚಿತ್ರಾಪುರ, ಸಾಯಿರಾಮ್, ಡಾ.ಬಿ.ಜಿ.ಸುವರ್ಣ, ಟಿ.ಕೆ.ಸುಧೀರ್ ,ನವೀನ್ ಡಿಸೋಜ ಹಾಗೂ ಇತರರು ಉಪಸ್ಥಿತರಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದರು.
Click this button or press Ctrl+G to toggle between Kannada and English