- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಭಾರತೀಯ ಜನತಾ ಪಾರ್ಟಿಯ ನೂತನ ಜಿಲ್ಲಾಧ್ಯಕ್ಷರಾಗಿ ಸುದರ್ಶನ ಎಂ

sudarshan [1]ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷರ ಆಯ್ಕೆಯ ಪ್ರಕ್ರಿಯೆಯು ರಾಜ್ಯ ಚುನಾವಣಾ ಉಸ್ತುವಾರಿ ಶ್ರೀ ನಿರ್ಮಲ್ ಕುಮಾರ್ ಸುರಾಣ ಮತ್ತು ಜಿಲ್ಲಾ ಚುನಾವಣಾಧಿಕಾರಿ ಕೆ.ಉದಯ ಕುಮಾರ್ ಶೆಟ್ಟಿಯವರ ವೀಕ್ಷಣೆಯಲ್ಲಿ ಭಾನುವಾರ ಮಂಗಳೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು.

ಜಿಲ್ಲೆಯ ನಿಕಟ ಪೂರ್ವ ಅಧ್ಯಕ್ಷರು ಶಾಸಕರುಗಳು, ವಿಭಾಗ ಪ್ರಭಾರಿ, ಸಹ ಪ್ರಭಾರಿ, ಚುನಾವಣಾ ವೀಕ್ಷಕರು, ನೂತನ ಮಂಡಲ ಅಧ್ಯಕ್ಷರುಗಳು ಇವರ ಸಮ್ಮುಖದಲ್ಲಿ ಸರ್ವಾನುಮತದಿಂದ ಸುದರ್ಶನ ಎಂ ಇವರನ್ನು ಮುಂದಿನ ಅವದಿಗೆ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

ಭಾರತೀಯ ಜನತಾ ಪಾರ್ಟಿಯ ಸಂಘಟನಾ ಪರ್ವದ ಕಾರ್ಯವು ಇಡೀ ದೇಶಾದ್ಯಂತ ನಡೆಯುತ್ತಿದೆ  ಎಂದು ಪ್ರಕಟಣೆ ತಿಳಿಸಿದೆ.

sudarshan [2]