ನವದೆಹಲಿ : ಕೇರಳದ ಪುರಾಣ ಪ್ರಸಿದ್ದ ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ಕುರಿತಂತೆ ಸಲ್ಲಿಕೆಯಾಗಿರುವ ಮರುಪರಿಶೀಲನಾ ಅರ್ಜಿ ಇಂದು ಸುಪ್ರೀಂ ಕೋರ್ಟ್ ನ ಒಂಬತ್ತು ಸದಸ್ಯರ ಪೀಠದ ಮುಂದೆ ಬರಲಿದೆ.
ಮಹಿಳೆಯರ ಪ್ರವೇಶಕ್ಕೆ ಅಸ್ತು ನೀಡಿದ್ದ ಸುಪ್ರೀಂ ಕೋರ್ಟ್ ತೀರ್ಪನ್ನು ಮರು ಪರಿಶೀಲಿಸುವಂತೆ ಸುಮಾರು 60 ಅರ್ಜಿಗಳು ಸಲ್ಲಿಕೆಯಾಗಿವೆ. ಕಳೆದ ವರ್ಷದ ನವೆಂಬರ್ 14ರಂದು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ಆಗಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಐದು ಸದಸ್ಯರ ಪೀಠ, ಇದನ್ನು ಒಂಬತ್ತು ಸದಸ್ಯರ ಪೀಠಕ್ಕೆ ವರ್ಗಾಯಿಸಿತ್ತು.
ಸದ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೋಬ್ಡೆ ನೇತೃತ್ವದ 9 ಮಂದಿ ಸದಸ್ಯರ ಪೀಠ ಮರು ಪರಿಶೀಲನಾ ಅರ್ಜಿ ವಿಚಾರಣೆ ನಡೆಸಲಿದೆ. ನ್ಯಾ. ಆರ್ ಭಾನುಮತಿ, ನ್ಯಾ. ಅಶೋಕ್ ಭೂಷಣ್, ನ್ಯಾ. ನಾಗೇಶ್ವರ್ ರಾವ್, ನ್ಯಾ. ಎಂ.ಎಂ. ಶಾಂತಗೌಡರ್, ನ್ಯಾ. ಎಸ್.ಎ ನಜೀರ್, ನ್ಯಾ. ಆರ್. ಸುಭಾಶ್ ರೆಡ್ಡಿ, ನ್ಯಾ. ಬಿ.ಆರ್. ಗವೈ ಮತ್ತು ನ್ಯಾ. ಸೂರ್ಯ ಕಾಂತ್ ರನ್ನು ಒಳಗೊಂಡ ಪೀಠ ಈ ಅರ್ಜಿ ವಿಚಾರಣೆ ನಡೆಸಲಾಗಿದೆ.