ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಇತ್ತೀಚೆಗಷ್ಟೇ ಎಸ್ಐಟಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಆರೋಪಿ ರಿಷಿಕೇಶ್ನನ್ನು 15 ದಿನಗಳ ಕಾಲ ಎಸ್ಐಟಿ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ನೀಡಿದೆ.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೂವರೆ ವರ್ಷದ ಬಳಿಕ ಮತ್ತೊಬ್ಬ ಆರೋಪಿ ರಿಷಿಕೇಶ್ ದೇವಾಡಿಕರ್ ಅಲಿಯಾಸ್ ಮುರಳಿ ಎಂಬಾತನನ್ನು ಎಸ್ಐಟಿ ಪೊಲೀಸರು ಮೂರು ದಿನಗಳ ಹಿಂದೆ ಜಾರ್ಖಂಡ್ನಲ್ಲಿ ಬಂಧಿಸಿದ್ದರು. ಬಂಧಿತ ಆರೋಪಿ ಕೃತ್ಯಕ್ಕೆ ಬಳಸಿದ್ದ ಪಿಸ್ತೂಲ್ಗಳನ್ನು ನಾಶ ಮಾಡಿದ್ದ ಎನ್ನಲಾಗಿದೆ. ಹೀಗಾಗಿ ಎಸ್ಐಟಿ ತಂಡವು ಆರೋಪಿಯನ್ನು ಸೆರೆಹಿಡಿಯಲು ಬಲೆ ಬೀಸಿತ್ತು. ಈತ ಗೌರಿ ಲಂಕೇಶ್ ಹತ್ಯೆ ಪ್ರಕರಣದ 18ನೇ ಆರೋಪಿಯಾಗಿದ್ದಾನೆ.
ರಿಷಿಕೇಶ್ನನ್ನು ಇಂದು ಸಿಟಿ ಸಿವಿಲ್ ಕೋರ್ಟ್ ಮುಂದೆ ಹಾಜರುಪಡಿಸಿದ ಎಸ್ಐಟಿ ಪೊಲೀಸರು ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆಗಾಗಿ 30 ದಿನಗಳ ಕಾಲ ವಶಕ್ಕೆ ನೀಡುವಂತೆ ಮನವಿ ಮಾಡಿದರು. ಎಸ್ಐಟಿ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ, ಆರೋಪಿಯನ್ನು 15 ದಿನಗಳ ಕಾಲ ವಶಕ್ಕೆ ಒಪ್ಪಿಸಿತು.