ಜ.15 ರಂದು ಅಡ್ಯಾರಿನಲ್ಲಿ ಸಿಎಎ, ಎನ್.ಆರ್.ಸಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ

10:03 AM, Tuesday, January 14th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

TMCC

ಮಂಗಳೂರು : ಸಿಎಎ, ಎನ್.ಆರ್.ಸಿ ಕಾಯ್ದೆ ವಿರುದ್ಧ ದ.ಕ.,ಉಡುಪಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಜ. 15 ರಂದು ಅಡ್ಯಾರ್ ಶಹಾ ಮೈದಾನದಲ್ಲಿ ನಡೆಯುವ ಬೃಹತ್ ಪ್ರತಿಭಟನಾ ಸಮಾವೇಶವನ್ನು ಯಶಸ್ವಿ ಗೊಳಸಲು ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ ಕರೆ ನೀಡಿದೆ.

ಎಸ್ ವೈ ಎಸ್ ನ‌ ಎಲ್ಲ ಘಟಕಗಳಿಂದ ವಿಶೇಷ ವಾಹನಗಳನ್ನು ವ್ಯವಸ್ಥೆ ಗೊಳಿಸಿ ಬೃಹತ್ ಸಂಖ್ಯೆಯಲ್ಲಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಪಾಲ್ಗೊಂಡು ಸಮ್ಮೇಳನವನ್ನು ಐತಿಹಾಸಿಕ ಗೊಳಿಸಬೇಕು ಹಾಗೂ ಗರಿಷ್ಠ ಮಟ್ಟದಲ್ಲಿ ಇದನ್ನು ಪ್ರಚಾರ ಮಾಡಬೇಕೆಂದು ಎಸ್.ವೈ.ಎಸ್ ರಾಜ್ಯಾಧ್ಯಕ್ಷ ಜಿ.ಎಂ.ಕಾಮಿಲ್ ಸಖಾಫಿ ಹಾಗೂ ಪ್ರಧಾನ ಕಾರ್ಯದರ್ಶಿ ಡಾ. ಎಮ್ಮೆಸ್ಸೆಂ ಝೈನೀ ಕಾಮಿಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English