- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಎಸ್. ಪ್ರದೀಪ ಕುಮಾರ ಕಲ್ಕೂರ ರವರಿಗೆ ಸಮಾಜ ಭೂಷಣ ಪ್ರಶಸ್ತಿ

samaja-bhusha [1]

ಉಡುಪಿ : ಸಾಹಿತ್ಯ, ಸಾಮಾಜಿಕ, ಧಾರ್ಮಿಕ, ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಕಳೆದ ಹಲವು ದಶಕಗಳಿಂದ ಸೇವಾ ನಿರತರಾಗಿದ್ದು ಕೊಂಡಿರುವುದಲ್ಲದೆ, ಸತತ 5 ಬಾರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅನನ್ಯವಾದ ಸಾಧನೆಗೈದಿರುವ ಎಸ್. ಪ್ರದೀಪ ಕುಮಾರ ಕಲ್ಕೂರ ಅವರನ್ನು ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಜರಗಿದ ಸಮಾರಂಭದಲ್ಲಿ ಪರ್ಯಾಯ ಪೂರೈಸುತ್ತಿರುವ ಪಲಿಮಾರು ಮಠಾಧೀಶ ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದಂಗಳವರು ಸಮಾಜ ಭೂಷಣ ಪ್ರಶಸ್ತಿ ನೀಡಿ ಅಭಿನಂದಿಸಿದರು.

ಕಲ್ಕೂರ ಅವರು ಪಲಿಮಾರು ಶ್ರೀಗಳ ಪ್ರರ್ಯಾಯದ ಆರಂಭದಿಂದಲೂ ವಿಶೇಷವಾದ ಸೇವೆಯನ್ನು ಸಲ್ಲಿಸಿರುವುದನ್ನು ಸ್ಮರಿಸಿದರು.

ಈ ಸಂದರ್ಭ ಪಲಿಮಾರು ಮಠದಕಿರಿಯ ಯತಿಗಳಾದ ಶ್ರೀ ವಿದ್ಯಾರಾಜೇಶ್ವರ ಸ್ವಾಮೀಜಿ ಉಪಸ್ಥಿತರಿದ್ದರು.