ದ್ವಿಚಕ್ರ ವಾಹನ ಕಳ್ಳತನ ಮಾಡುವ ವ್ಯಕ್ತಿ ಬಂಧನ

11:49 AM, Saturday, January 18th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

cheluvayya

ಮೈಸೂರು : ಮೈಸೂರು ನಗರ ಸಿ.ಸಿ.ಬಿ. ಪೊಲೀಸರು ಮಾಹಿತಿ ಮೇರೆಗೆ 16.01.2020 ರಂದು ಹೂಟಗಳ್ಳಿ, ಎಸ್.ಆರ್.ಎಸ್. ಕಾಲೋನಿಯ ಕೆ.ಇ.ಬಿ. ಕಛೇರಿಯ ಬಳಿ ಕಾರ್ಯಾಚರಣೆ ನಡೆಸಿ, ದ್ವಿಚಕ್ರ ವಾಹನ ಕಳ್ಳತನ ಮಾಡುವ ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ.

ಬಂಧಿತನನ್ನು ಮಹದೇವ ಬಿನ್ ಚೆಲುವಯ್ಯ,( 22), ಲಕ್ಷ್ಮಿಪುರ ಗ್ರಾಮ, ಕೆ.ಆರ್.ನಗರ ಮೈಸೂರು ಜಿಲ್ಲೆ ಎಂದು ಗುರುತಿಸಲಾಗಿದ್ದು, ಈತನನ್ನು ವಶಕ್ಕೆ ಪಡೆದು, ವಿಚಾರಣೆಗೊಳಪಡಿಸಲಾಗಿ, ಈತ ಮೈಸೂರು ನಗರ, ಮೈಸೂರು ಜಿಲ್ಲೆ, ಬೆಂಗಳೂರಿನಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಈತನಿಂದ 6,00,000ರೂ. ಮೌಲ್ಯದ ವಿವಿಧ ಕಂಪನಿಯ 11 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಪತ್ತೆ ಕಾರ್ಯದಿಂದ ಮೈಸೂರು ನಗರದ ಜಯಲಕ್ಷ್ಮಿಪುರಂ ಠಾಣೆಯ-1, ಮೈಸೂರು ಜಿಲ್ಲೆ ಕೆ.ಆರ್. ನಗರ ಠಾಣೆಯ-1, ಪಿರಿಯಾಪಟ್ಟಣ ಠಾಣೆಯ-1, ಬೆಂಗಳೂರು ನಗರ ವಿಜಯನಗರ ಠಾಣೆಯ-1 ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳು ಪತ್ತೆಯಾಗಿದ್ದು, ಇನ್ನು 07 ವಾಹನಗಳ ವಾರಸುದಾರರು ಪತ್ತೆಯಾಗಬೇಕಾಗಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English