ಉಳ್ಳಾಲ ನೇತ್ರಾವತಿ ಸೇತುವೆಯ ಮೇಲೆ ಶೀಘ್ರವೇ ಸಿಸಿ ಕ್ಯಾಮರಾ ಅಳವಡಿಕೆಗೆ ನಿರ್ಧಾರ : ಶಾಸಕ ವೇದವ್ಯಾಸ್ ಕಾಮತ್

3:00 PM, Saturday, January 18th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

kamath

ಮಂಗಳೂರು : ಉಳ್ಳಾಲದ ನೇತ್ರಾವತಿ ನದಿ ಸೇತುವೆಯ ಎರಡೂ ಕಡೆಗಳಲ್ಲಿ ಸುರಕ್ಷತಾ ತಡೆಗೋಡೆ ಅಳವಡಿಕೆಗೆ ಕ್ರಿಯಾ ಯೋಜನೆ ಹಾಗೂ ಸೇತುವೆಯ ಎರಡೂ ಬದಿಗಳಲ್ಲಿ ತಕ್ಷಣವೇ ಸಿಸಿ ಕ್ಯಾಮರಾ ಅಳವಡಿಕೆಗೆ ಶನಿವಾರ ನಡೆದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಸೂಚನೆ ನೀಡಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

ವೆಲೆನ್ಸಿಯಾ ಜಂಕ್ಷನ್‌ನಲ್ಲಿರುವ ಪಾರ್ಕನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಕಡೆಯಿಂದ ತಕ್ಷಣವೇ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ನಗರದ ಸೌಂದರ್ಯ ಹೆಚ್ಚಿಸಲು ಸಹಕಾರಿಯಾಗುವಂತೆ ಪಾರ್ಕ್ ಅಭಿವೃದ್ಧಿಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸಭೆಯಲ್ಲಿ ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಶ್ರೀಕಾಂತ್ ರಾವ್, ಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English