ಉದ್ಧವ್​ ಠಾಕ್ರೆ ವಿವಾದಾತ್ಮಕ ಹೇಳಿಕೆ : ಭಾನುವಾರದಿಂದ ಶಿರಡಿ ಸಾಯಿಬಾಬಾ ಮಂದಿರ ಬಂದ್​

3:41 PM, Saturday, January 18th, 2020
Share
1 Star2 Stars3 Stars4 Stars5 Stars
(No Ratings Yet)
Loading...

sai-baba

ಶಿರಡಿ : ಭಾನುವಾರದಿಂದ ಶಿರಡಿ ಸಾಯಿ ಬಾಬಾ ದೇವಾಸ್ಥಾನ ಬಂದ್ ಆಗಲಿದೆ ಎಂದು ಸಾಯಿಬಾಬಾ ಸಂಸ್ಥಾನ ಟ್ರಸ್ಟ್ ತಿಳಿಸಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸಾಯಿ ಬಾಬಾ ಜನ್ಮ ಸ್ಥಳದ ಬಗ್ಗೆ ನೀಡಿದ್ದ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಇಂದು ಸಂಜೆ ಟ್ರಸ್ಟ್ನ ಸದಸ್ಯರು ಮತ್ತು ಗ್ರಾಮಸ್ಥರು ಸಭೆ ಸೇರಲಿದ್ದಾರೆ.

ವಿವಾದಾತ್ಮಕ ಹೇಳಿಕೆ ವಿರುದ್ಧ ಭಾನುವಾರ (ಜನವರಿ 19)ದಿಂದ ದೇಗುಲವನ್ನು ಮುಚ್ಚಲು ನಿರ್ಧರಿಸಿದ್ದೇವೆ ಎಂದು ಸಾಯಿ ಬಾಬಾ ಸಂಸ್ಥಾನ ಟ್ರಸ್ಟ್ನ ವಾಕ್ಚೌರೆ ತಿಳಿಸಿದ್ದಾರೆ.

ಈ ಸಂಬಂಧ ಚರ್ಚಿಸಲು ಇಂದು ಸಂಜೆ ಸಭೆ ಕರೆಯಲಾಗಿದೆ ಎಂದ ಅವರು, ಬೇರೆ ಸ್ಥಳಗಳಿಂದ ಬರುವ ಭಕ್ತರಿಗೆ ಸಮಸ್ಯೆಯಾಗದಂತೆ ನೋಡಲಾಗುವುದು ಎಂದು ಅವರು ತಿಳಿಸಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English