‘ದೇಶಕ್ಕೆ ನಮ್ಮ ಕೊಡುಗೆ ಏನು?’: ನಿವೃತ್ತ ಪೊಲೀಸ್ ಅಧಿಕಾರಿ ಕೆ.ಅಣ್ಣಾಮಲೈ

2:09 PM, Monday, January 27th, 2020
Share
1 Star2 Stars3 Stars4 Stars5 Stars
(No Ratings Yet)
Loading...

Alvas-Republicday ಮೂಡುಬಿದಿರೆ : ದೇಶದಲ್ಲಿ ನೂರ ಮೂವತ್ತು ಕೋಟಿ ಜನಸಂಖ್ಯೆ ಇದ್ದರೂ ಅಬ್ದುಲ್ ಕಲಾಂ ಕಂಡ 2020 ಯ ಕನಸನ್ನು ಪೂರ್ಣವಾಗಿ ಸಾಕಾರಗೊಳಿಸಲು ವಿಫಲರಾಗಿದ್ದೇವೆ. ಸಾಧಿಸಬೇಕಾದ ವಿಷಯಗಳು ಇನ್ನು ತುಂಬಾ ಇವೆ. ಭಾರತದಲ್ಲಿ ಪ್ರತಿದಿನವು ಹೊಸ ಹೊಸ ಸಮಸ್ಯೆಗಳು ಎದುರಾಗುತ್ತಿವೆ. ದೇಶದಲ್ಲಿ 40 ಕೋಟಿಯಷ್ಟು ಜನರು ತಿನ್ನಲು ಅನ್ನ ಸಿಗದೆ ನರಳುತ್ತಿದ್ದಾರೆ. ನಮ್ಮ ರಕ್ಷಣೆಯಿಂದ ಹಿಡಿದು ದೇಹದ ಆರೋಗ್ಯವನ್ನು ಕಾಪಾಡಿ ಕೊಳ್ಳುವವರೆಗೆ ಪ್ರತೀ ವ್ಯವಸ್ಥೆಯನ್ನು ದೇಶ ಮಾಡಿಕೊಟ್ಟಿದೆ ಹೀಗಿರುವಾಗ ದೇಶ ಚೆನ್ನಾಗಿರಲು ನಾವೇನು ಕೊಡುಗೆ ನೀಡಿದ್ದೇವೆ ಎಂಬುದನ್ನು ಚಿಂತಿಸುವ ಅನಿವಾರ್ಯತೆ ಇದೆ ಎಂದು ಮಾಜಿ ಐಪಿಎಸ್ ಆಫೀಸರ್ ಅಣ್ಣಾಮಲೈ ಹೇಳಿದರು.

ಪುತ್ತಿಗೆಯ ವನಜಾಕ್ಷಿ ಕೆ ಶ್ರೀಪತಿ ಭಟ್ ಬಯಲು ವೇದಿಕೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ದ ವತಿಯಿಂದ ನಡೆದ 71 ನೇ ಗಣರಾಜ್ಯೋತ್ಸವದ ದ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ’ಗಣರಾಜ್ಯೋತ್ಸವ ಆಚರಿಸುವುದು ನಮ್ಮ ಕರ್ತವ್ಯಗಳನ್ನು ತಿಳಿಯಲು. ದೊಡ್ಡ ಮಟ್ಟಿನ ದೇಶ ಸೇವೆ ಸಾಧ್ಯವಾಗದಿದ್ದರೂ ನಮ್ಮ ಊರಿನಲ್ಲಿ ಪರಿಸರಕ್ಕಾಗಿ ಅಥವಾ ಜನರಿಗಾಗಿ ಮಾಡುವ ಸೇವೆಗಳು ದೇಶಕ್ಕಾಗಿ ಮಾಡುವ ಕರ್ತವ್ಯಗಳು. ನಮ್ಮ ಜೀವನದಲ್ಲಿ ದೇಶ ಮೊದಲ ಪ್ರಾಧಾನ್ಯತೆಯಾಗಬೇಕು’ ಎಂದರು. ಆಳ್ವಾಸ್ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳನ್ನು ಕೇವಲ ಶಿಕ್ಷಣಕ್ಕೆ ಮಾತ್ರ ಸೀಮಿತವಾಗಿಸಿಲ್ಲ. ಶಿಕ್ಷಣದ ಜೊತೆಗೆ ಉತ್ತಮ ನಡತೆ, ಮೌಲ್ಯ ಹಾಗೂ ದೇಶ ಕಟ್ಟುವ ಕಾರ್ಯವನ್ನೂ ಮಾಡುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿ?ನವನ್ನು ಶ್ಲಾಘಿಸಿದರು.

ಅತಿಥಿಗಳನ್ನು ಕೆಡೆಟ್ ಕ್ಯಾಪ್ಟನ್ ಚಂದನ ಎಸ್, ಪಿಟಿ ಆಫೀಸರ್ ಗಳಾದ ಕೀರ್ತನ ಶೆಟ್ಟಿ, ಶರಣ್ಯ ಎಂ.ಎನ್, ಸೇಜಲ್ ಅವರು ವೇದಿಕೆಗೆ ಕರೆತಂದರು. ಪರೇಡ್ ಕಮಾಂಡರ್ ಸೀನಿಯರ್ ಅಂಡರ್ ಆಫೀಸರ್ ಮುತ್ತಮ್ಮ ವರದಿ ನೀಡಿದರು. ಗಾರ್ಡ್ ಕಮಾಂಡರ್ ಜ್ಯೂನಿಯರ್ ಅಂಡರ್ ಆಫೀಸರ್ ಮನೋಜ್ ನೇತೃತ್ವದಲ್ಲಿ ಆಕ?ಕ ಪಥ ಸಂಚಲನ ನಡೆಯಿತು. ವಂದೇ ಮಾತರಂ ಗೀತೆಯ ಬಳಿಕ ಧ್ವಜಾರೋಹಣ ಮಾಡಲಾಯಿತು. ರಾ?ಗೀತೆ ಹಾಡುವುದರ ಮೂಲಕ ದೇಶಕ್ಕೆ ಗೌರವ ಸಲ್ಲಿಸಲಾಯಿತು.

Alvas-Republicday ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎನ್‌ಸಿಸಿ ಗ್ರೂಪ್ ಕಮಾಂಡರ್ ಕರ್ನಲ್ ಎಕೆ ಶರ್ಮ ವಹಿಸಿದ್ದರು. ವಿಶೇ? ಆಹ್ವಾನಿತರಾದ ಕರ್ನಲ್ ಮನೋಜ್ ವಿ ಯು, ಗ್ರೂಪ್ ಕ್ಯಾಪ್ಟನ್ ಆರ್ ಶ್ರೀನಿವಾಸನ್, ಕಮಾಂಡರ್ ವಿಫುಲ್ ಗುಪ್ತ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ್ ಆಳ್ವ, ಟ್ರಸ್ಟಿಗಳಾದ ವಿವೇಕ್ ಆಳ್ವ ಮತ್ತು ಡಾ| ವಿನಯ್ ಆಳ್ವ ಉಪಸ್ಥಿತರಿದ್ದರು.

ಆಕರ್ಷಕ  ಪಥಸಂಚಲನ
20 ನಿಮಿಷಗಳ ಕಾಲ ನಡೆದ ಆಕರ್ಷಕ  ಪಥ ಸಂಚಲನದಲ್ಲಿ, ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗಿನ ವಿವಿಧ ಕಾಲೇಜುಗಳ ಭೂಸೇನೆ, ನೌಕಾದಳ ಮತ್ತು ವಾಯುದಳದ 2400 ಎನ್‌ಸಿಸಿ ಕೆಡೆಟ್‌ಗಳು, ಎನ್‌ಸಿಸಿ ಬೆಟಾಲಿಯನ್‌ಗಳ ಕ್ಯಾಪ್ಟನ್‌ಗಳು, ಜತೆಗೆ 400 ರೋವರ್- ರೇಂಜರ್ ಹಾಗೂ ಸ್ಕೌಟ್ಸ್- ಗೈಡ್ಸ್ ವಿದ್ಯಾರ್ಥಿಗಳು, 1300 ಎನ್ ಎಸ್ ಎಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸಂಭ್ರಮಕ್ಕೆ ಸಾಕ್ಷಿಯಾದ ನಾಗರಿಕರು
ಆಳ್ವಾಸ್‌ನಲ್ಲಿ ನಡೆದ ಗಣರಾಜ್ಯೋತ್ಸವಕ್ಕೆ ಸಾವಿರಾರು ಜನ ಸಾಕ್ಷಿಯಾದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸೇರಿ 25,000 ಜನ; ಗಣ್ಯರು, ವಿಶೇಷ ಆಹ್ವಾನಿತರು, ಸಂಸ್ಥೆಯ ಪಾಲಕರು ಹಾಗೂ ಮೂಡುಬಿದಿರೆಯ ಸಾರ್ವಜನಿಕರು ಸೇರಿ 5000 ಹೀಗೆ ಒಟ್ಟು 30000 ಜನ ಆಳ್ವಾಸ್ ಗಣರಾಜ್ಯೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾದರು.

ತ್ರಿವರ್ಣದ ಮೆರುಗು
’ಕೋಟಿಕಂಠೊ ಸೆ’ ಏಕತಾ ಹಾಡಿಗೆ ಸಾವಿರ ಸಂಖ್ಯೆಯಲ್ಲಿ ಸೇರಿದ್ದ ವಿದ್ಯಾರ್ಥಿ ಸಮೂಹ ದನಿಗೂಡಿಸಿ, ತ್ರಿವರ್ಣಧ್ವಜವನ್ನು ಹಾಡಿನ ತಾಳಕ್ಕೆ ಲಯಬದ್ಧವಾಗಿ ಬೀಸಿ ಸಂಭ್ರಮಿಸಿದರು. ನೆರೆದವರೆಲ್ಲರ ಕೈಯಲ್ಲಿದ್ದ ರಾ?ಧ್ವಜ, ತ್ರಿವರ್ಣ ಬಣ್ಣದ ಟೀ- ಶರ್ಟ್ ಧರಿಸಿದ್ದ ವಿದ್ಯಾರ್ಥಿಗಳು ಸಭೆಯ ಮಧ್ಯದಲ್ಲಿ ಮೂಡಿಸಿದ್ದ ’ಇಂಡಿಯಾ’, ತ್ರಿವರ್ಣದ ಕೊಡೆಗಳು, ಬಾನಂಗಳದಿ ಹಾರಿಬಿಟ್ಟ ತ್ರಿವರ್ಣದ ಬೆಲೂನ್‌ಗಳು, ಹೀಗೆ ಪುತ್ತಿಗೆಯ ವನಜಾಕ್ಷಿ ಶ್ರೀಪತಿ ಭಟ್ ವೇದಿಕೆಯಲ್ಲಿ ತ್ರಿವರ್ಣ ಸಂಭ್ರಮ ಮನೆ ಮಾಡಿತ್ತು.

Alvas-Republicday

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English