- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಅಪರಾಧಿ ಮುಕೇಶ್ ಸಿಂಗ್ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಕ್ಷಮಾದಾನ ಅರ್ಜಿ ವಜಾ : ಗಲ್ಲು ಶಿಕ್ಷೆ ಖಾಯಂ

mukesh [1]

ಹೊಸದಿಲ್ಲಿ : ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳಲ್ಲಿ ಓರ್ವನಾದ ಮುಕೇಶ್ ಕುಮಾರ್ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ವಜಾ ಮಾಡಲಾಗಿದೆ.

ನ್ಯಾ.ಆರ್ ಭಾನುಮತಿ ನೇತೃತ್ವದ ಮೂವರು ನ್ಯಾಯಾಧೀಶರನ್ನು ಒಳಗೊಂಡ ಪೀಠ, ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿಯನ್ನು ತ್ವರಿತವಾಗಿ ವಿಲೇವಾರಿ ಮಾಡಿದರೆಂದರೆ ಅವರು ಅರ್ಜಿಯ ಬಗ್ಗೆ ಕಡೆಗಣಿಸಲಾಗಿದೆ ಎಂದಲ್ಲ. ಆ ಸಂದರ್ಭದಲ್ಲಿ ವಿಚಾರಣಾಧೀನ ನ್ಯಾಯಾಲಯ, ಹೈಕೋರ್ಟ್, ಸುಪ್ರೀಂ ಕೋರ್ಟ್ ಗಳಲ್ಲಿ ನೀಡಲಾಗಿರುವ ತೀರ್ಪಿನ ಪ್ರತಿಯನ್ನು ರಾಷ್ಟ್ರಪತಿಗಳ ಮುಂದಿಡಲಾಗಿತ್ತು ಎಂದಿದೆ.

ಸರಿಯಾದ ಆಧಾರವಿಲ್ಲದ ಕಾರಣ ಅಪರಾಧಿ ಮುಕೇಶ್ ಸಿಂಗ್ ನ ಕ್ಷಮಾದಾನ ಅರ್ಜಿಯನ್ನು ವಜಾ ಮಾಡಲಾಗಿದೆ. ಜೈಲಿನಲ್ಲಿ ನೋವು ಅನುಭವಿಸಬೆಕಾಗುತ್ತದೆ ಎನ್ನುವುದು ಕ್ಷಮಾದಾನ ಅರ್ಜಿಯ ತಿರಸ್ಕಾರವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಇರುವ ಕಾರಣವಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.

ಇದರಿಂದಾಗಿ ನಿರ್ಭಯಾ ಗ್ಯಾಂಗ್ ಆರೋಪಿಗಳಿಗೆ ಗಲ್ಲು ಶಿಕ್ಷೆ ಖಚಿತವಾಗಿದೆ.