ಬೆಳ್ತಂಗಡಿ : ಹಲ್ಲು ನೋವಿನ ಚಿಕಿತ್ಸೆಗೆ ಬಂದ ಮಹಿಳಾ ರೋಗಿಯೊಂದಿಗೆ ಅಸಭ್ಯ ವರ್ತನೆ; ದೂರು ದಾಖಲು

4:02 PM, Thursday, January 30th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

sudhakar

ಬೆಳ್ತಂಗಡಿ : ವೈದ್ಯರೋರ್ವರು ರೋಗಿ ಜತೆ ಅಸಭ್ಯವಾಗಿ ವರ್ತನೆ ಮಾಡಿದ ಘಟನೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಜ.29 ರ ಬುಧವಾರ ನಡೆದಿದೆ.

ಬೆಳ್ತಂಗಡಿ ಸರಕಾರಿ ಆಸ್ಪತ್ರೆ ದಂತ ವೈದ್ಯ ಸುಧಾಕರ ಆರೋಪಿ. ಹಲ್ಲು ನೋವಿಗೆ ಸಂಬಂಧಿಸಿ ಚಿಕಿತ್ಸೆಗೆಂದು ಬಂದ ಯುವತಿ ಜತೆ ಅಸಭ್ಯವಾಗಿ ವರ್ತಿಸಿರುವ ಕುರಿತು, ಯುವತಿ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.ಮೂಲತಃ ನೆಲ್ಯಾಡಿಯವರಾಗಿರುವ. ಡಾ. ಸುಧಾಕರ್ ಅವರು ವಿಟ್ಲ ಮತ್ತು ಬೆಳ್ತಂಗಡಿ ಆಸ್ಪತ್ರೆಯಲ್ಲಿ ಪ್ರಭಾರ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು ಜಾಮೀನು ನೀಡಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English