ಲೋಕಸಭೆಯಲ್ಲಿ ಗದ್ದಲ ಸೃಷ್ಟಿಸಿದ ಅನಂತ ಕುಮಾರ್​ ಹೆಗಡೆ ವಿವಾದಾತ್ಮಕ ಹೇಳಿಕೆ : ಕ್ಷಮೆಗೆ ಪಟ್ಟು ಹಿಡಿದ ಪ್ರತಿಪಕ್ಷಗಳು

2:08 PM, Tuesday, February 4th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

loka-sabhe

ನವದೆಹಲಿ : ಗಾಂಧೀಜಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಲೋಕಸಭೆಯಲ್ಲಿ ಭಾರೀ ಆಕ್ರೋಶ ವ್ಯಕ್ತವಾಯಿತು. ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ನಿಂದನಾತ್ಮಕ ಹೇಳಿಕೆ ನೀಡಿದ್ದ ಸಂಸದರು ಈ ಕುರಿತು ಕ್ಷಮೆಯಾಚಿಸಬೇಕು ಎಂದು ಪ್ರತಿಪಕ್ಷಗಳು ಪಟ್ಟು ಹಿಡಿದವು.

ಸದಾ ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದ ಹೆಗಡೆ ಈಗ ಗಾಂಧೀಜಿ ಕುರಿತು ಅವಹೇಳನ ಹೇಳಿಕೆ ನೀಡುತ್ತಿದ್ದಾರೆ. ಈ ಕುರಿತು ಎಲ್ಲೆಡೆ ಆಕ್ಷೇಪ ವ್ಯಕ್ತವಾದರೂ ಅವರು ಕ್ಷಮೆಯಾಚಿಸಿಲ್ಲ. ಪಕ್ಷ ಕೂಡ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹೆಗಡೆ ಹೇಳಿಕೆಗೆ ಬಿಜೆಪಿ ನಿಲುವೇನು ಎಂದು ಸಂಸದ ಕಮಲ್ನಾಥ್ ಪ್ರಶ್ನಿಸಿದರು.

ಅಷ್ಟೇ ಅಲ್ಲದೇ ಬಿಜೆಪಿ ಸಂಸದರು ಪದೇ ಪದೇ ಗೋಡ್ಸೆ ಪರವಾಗಿ ಹೇಳಿಕೆ ನೀಡುತ್ತಾರೆ. ಬಿಜೆಪಿ ನಾಯಕರು ಗಾಂಧಿಜೀ ಪರವಾಗಿದ್ದೀರಾ ಅಥವಾ ಗೋಡ್ಸೆ ಜೊತೆಗಿದ್ದೀರಾ ಎಂಬುದನ್ನು ಸ್ಪಷ್ಟಪಡಿಸಿ ಎಂದು ಆಗ್ರಹಿಸಿದರು.

ಎರಡು ಸದನಗಳಲ್ಲಿ ಹೆಗಡೆ ಹೇಳಿಕೆ ವಿರುದ್ಧ ಪ್ರತಿಪಕ್ಷಗಳು ಹರಿಹಾಯ್ದ ಹಿನ್ನೆಲೆ ಗದ್ದಲದ ವಾತಾವರಣ ನಿರ್ಮಾಣವಾಯಿತು. ಈ ಹಿನ್ನೆಲೆಯಲ್ಲಿ ಲೋಕಸಭಾ ಸದನವನ್ನು ಮಧ್ಯಾಹ್ನ 12ಕ್ಕೆ ಮುಂದೂಡಲಾಯಿತು.

ಕಳೆದ ಚಳಿಗಾಲದ ಲೋಕಸಭಾ ಅಧಿವೇಶನದ ಚರ್ಚೆ ವೇಳೆ ಬಿಜೆಪಿ ಸದಸ್ಯೆ ಸಾಧ್ವಿ ಪ್ರಗ್ಯಾ ಠಾಕೂರ್ ಅವರು ಮಹಾತ್ಮ ಗಾಂಧಿಜೀ ಕೊಂದ ಗೋಡ್ಸೆ ಒಬ್ಬ ಮಹಾನ್ ದೇಶಭಕ್ತ ಎಂದಿದ್ದರು. ಇದಕ್ಕೆ ಮೊದಲು ಕೂಡ ಚುನಾವಣಾ ಪ್ರಚಾರದ ವೇಳೆ ಕೂಡ ನಾಥುರಾಮ್ ಗೋಡ್ಸೆ ಒಬ್ಬ ದೇಶಭಕ್ತರಾಗಿದ್ದರು, ಮುಂದೆಯೂ ಅವರು ದೇಶಭಕ್ತರೇ. ಅವರನ್ನು ಭಯೋತ್ಪಾದಕ ಎಂದು ಕರೆಯುವವರು ಆತ್ಮವಿಮರ್ಶೆ ಮಾಡಿಕೊಳ್ಳಲಿ. ಇಂಥವರಿಗೆ ಜನರು ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದಿದ್ದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English