- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಅಂತರ್ ರಾಜ್ಯ ವಾಹನ ಕಳ್ಳತನದ ನಾಲ್ವರು ಆರೋಪಿಗಳ ಸೆರೆ

SP Abhishek Goel [1]ಮಂಗಳೂರು :ದ.ಕ ಜಿಲ್ಲೆಯ ಪುತ್ತೂರು, ಸುಳ್ಯ, ಉಪ್ಪಿನಂಗಡಿ, ಕಡಬ, ಉಳ್ಳಾಲ ಹಾಗೂ ಕೇರಳ ರಾಜ್ಯದ ಮಂಜೇಶ್ವರ ಪೊಲೀಸ್ ಠಾಣಾ ಸರಹದ್ದಿನಲ್ಲಿ ವಾಹನ ಕಳ್ಳತನ ಹಾಗೂ ಗ್ಯಾಸ್ ಸಿಲಿಂಡರ್ ಕಳ್ಳತನ ಮಾಡಿದ 4 ಜನ ಆರೋಪಿಗಳನ್ನು ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ಜಿಲ್ಲಾ ಅಪರಾಧ ಪತ್ತೆದಳ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ಆರೋಪಿಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರಿಗೆ ಹಸ್ತಾಂತರಿಸಿರುವುದಾಗಿ ಬುಧವಾರ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಪೊಲೀಸ್ ಅಧೀಕ್ಷಕ ಅಭಿಷೇಕ್ ಗೋಯಲ್ ಈ ವಿಷಯವನ್ನು ತಿಳಿಸಿದರು.

vehicle racket, [2]ಅಬ್ದುಲ್ ರಶೀದ್ (21), ಮಹಮ್ಮದ್ ಹ್ಯಾರಿಸ್ (19), ಮಹಮ್ಮದ್ ಫೈಜಲ್ (21), ಕಮಲಾಕ್ಷ (29) ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದಾರೆ. 7 ಪಲ್ಸರ್ ಬೈಕ್, ಎರಡು ಹೋಂಡಾ ಆಕ್ಟಿವ, ಒಂದು ಯಮಹಾ ಬೈಕ್ ಹಾಗೂ 7 ಗ್ಯಾಸ್ ಸಿಲಿಂಡರ್ ಗಳನ್ನು ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದ್ದು, ಒಟ್ಟು 15 ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ ಎಂದು ಅವರು ತಿಳಿಸಿದರು. ಕಳ್ಳತನ ಮಾಡಿದ ವಸ್ತುಗಳ ಅಂದಾಜು ಮೌಲ್ಯ 4,50,000 ಎನ್ನಲಾಗಿದೆ.

ಪತ್ರಿಕಾಗೋಷ್ಟಿಯಲ್ಲಿ ಪುತ್ತೂರು ಎಎಸ್ಪಿ ಅನುಚೇತ್ ಉಪಸ್ಥಿತರಿದ್ದರು.