ಸುಳ್ಯ : ಸುಳ್ಯ-ಬಡ್ಡಡ್ಕ ರಸ್ತೆಯ ಕುಡೆಕಲ್ಲು ಬಳಿ ಜ.19 ರಂದು ಸಂಭವಿಸಿದ ಬೈಕ್- ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕಲ್ಲಪಳ್ಳಿ ನಿವಾಸಿ ವಿನೀತ್ ಚಿಕಿತ್ಸೆ ಫಲಕಾರಿಯಾಗದೆ ಫೆ. 6 ರಂದು ರಾತ್ರಿ ಮೃತಪಟ್ಟಿದ್ದಾರೆ.
ಜ.19 ರಂದು ಬೆಳಿಗ್ಗೆ ಸುಳ್ಯ ಕಡೆಯಿಂದ ಬಡ್ಡಡ್ಕ ಕಡೆಗೆ ಸಂಚರಿಸುತ್ತಿದ್ದ ವ್ಯಾಗನರ್ ಕಾರಿಗೆ ಬಡ್ಡಡ್ಕದಿಂದ ಸುಳ್ಯಕ್ಕೆ ಬರುತ್ತಿದ್ದ ಬೈಕ್ ಆಲೆಟ್ಟಿಯ ಕುಡೆಕಲ್ಲು ಎಂಬ ತಿರುವಿನಲ್ಲಿ ಕಾರಿಗೆ ಡಿಕ್ಕಿ ಹೊಡೆದಿತ್ತು.
ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು. ನಂತರ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.