ಮಂಗಳೂರು : ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರಾಂತೀಯ ಹಿಂದೂ ಅಧಿವೇಶನ ಮಂಗಳೂರಿನಲ್ಲಿ ನಡೆಯಲಿದೆ.
ಈ ಪ್ರಾಂತೀಯ ಹಿಂದೂ ಅಧಿವೇಶನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಾರ್ಯ ಮಾಡುವ 50 ಕ್ಕೂ ಅಧಿಕ ಹಿಂದೂ ಸಂಘಟನೆಗಳ 100 ಕ್ಕೂ ಅಧಿಕ ಹಿಂದೂ ಸಂಘಟನೆಯ ಪದಾಧಿಕಾರಿಗಳು, 100 ಕ್ಕೂ ಅಧಿಕ ರಾಷ್ಟ್ರ ಪ್ರೇಮಿ ವಕೀಲರು, ಸಾಮಾಜಿಕ ಹೋರಾಟಗಾರರು ಮತ್ತು ಹಿಂದೂ ಧಾರ್ಮಿಕ ಮುಖಂಡರು, ಉದ್ಯಮಿಗಳು ಭಾಗಿಯಾಗುವವರಿದ್ದಾರೆ.
ಈ ಅಧಿವೇಶನದಲ್ಲಿ ಪೌರತ್ವ ತಿದ್ದುಪಡಿ ಕಾಯಿದೆಯ ವಿರೋಧದ ನೆಪದಲ್ಲಿ ನಡೆಯುತ್ತಿರುವ ದೇಶ ವಿರೋಧಿ ಕೃತ್ಯಗಳು, ಅಕ್ರಮ ಬಾಂಗ್ಲಾ ನುಸುಳುಕೋರರ ಸಮಸ್ಯೆ, ರಾಜ್ಯದಲ್ಲಿ ಹೆಚ್ಚುತ್ತಿರುವ ಜಿಹಾದಿ ಭಯೋತ್ಪಾಧನೆ, ದೇವತೆಗಳ ಅಪಮಾನ, ದೇವಸ್ಥಾನಗಳ ಸರಕಾರೀಕರಣ, ಮತಾಂತರ, ಲವ್ ಜಿಹಾದ್ ಮುಂತಾದ ಸಮಸ್ಯೆಗಳ ಬಗ್ಗೆ ಚರ್ಚೆ ಮತ್ತು ಅದನ್ನು ತಡೆಯಲು ಮಾಡಬೇಕಾದ ಕಾನೂನಾತ್ಮಕ ಮತ್ತು ಸಂಘಟನಾತ್ಮಕ ಪರಿಹಾರ ಚರ್ಚೆ ನಡೆಯಲಿದೆ ಮತ್ತು ಹಿಂದೂ ಸಂಘಟನೆಗಳ ಐಕ್ಯತೆ, ಹಿಂದೂಗಳಿಗೆ ಧರ್ಮಶಿಕ್ಷಣ ನೀಡಲು, ವ್ಯಾಪಕವಾಗಿ ಧರ್ಮಜಾಗೃತಿ ಮಾಡುವ ಬಗ್ಗೆ ಕಾರ್ಯಯೋಜನೆ ರೂಪಿಸಲಾಗುವುದು.
ಇದರಲ್ಲಿ ಮುಖ್ಯ ಅತಿಥಿಯಾಗಿ ಬರುವವರ ಛಾಯಾಚಿತ್ರವನ್ನು ಲಗತ್ತಿಸಲಾಗಿದೆ.