ಭೀಕರ ಅಪಘಾತ : ಸೇತುವೆ ಮೇಲಿಂದ ಟ್ರ್ಯಾಕ್ಟರ್ ಪಲ್ಟಿ; ಆರು ಜನ ದುರ್ಮರಣ

5:17 PM, Saturday, February 8th, 2020
Share
1 Star2 Stars3 Stars4 Stars5 Stars
(No Ratings Yet)
Loading...

belagavi

ಬೆಳಗಾವಿ : ಕೂಲಿ ಕೆಲಸಕ್ಕೆ ಕಾರ್ಮಿಕರನ್ನು ತುಂಬಿಕೊಂಡು ಹೊರಟಿದ್ದ ಟ್ರ್ಯಾಕ್ಟರ್ ಒಂದು ಬೋಗೂರ ಗ್ರಾಮದ ಬಳಿಯ ಸೇತುವೆ ಮೇಲಿಂದ ಪಲ್ಟಿಯಾಗಿ ಬಿದ್ದು ಸುಮಾರು ಆರು ಜನ‌ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.

ಬೋಗೂರ ಗ್ರಾಮದ ಸಾವಿತ್ರಿ ಬಾಬು ಹುಣಸಿಕಟ್ಟಿ, ತಂಗೆವ್ವ ಯಲ್ಲಪ್ಪ ಹುಣಸೀಕಟ್ಟಿ, ಅಶೋಕ ಫಕೀರ ಕೇದಾರಿ, ಶಾಂತಮ್ಮ ಯಲ್ಲಪ್ಪ ಜುಂಜರಿ, ಶಾಂತವ್ವ ಹನುಮಂತ ಅಳಗುಂಡಿ, ನಾಗವ್ವ ಯಶವಂತ ಮಾಠೋಳ್ಳಿ ಮೃತಪಟ್ಟವರು.

ಖಾನಾಪುರ ತಾಲೂಕಿನ ಬೋಗೂರ ಗ್ರಾಮದಿಂದ ಕಾರ್ಮಿಕರು ಕೂಲಿ ಕೆಲಸಕ್ಕೆ ಇಟಗಿಗೆ ಹೊರಟಿದ್ದರು. ವೇಗವಾಗಿ ಹೊರಟಿದ್ದ ಟ್ರ್ಯಾಕ್ಟರ್ ಸುಮಾರು 30 ಅಡಿ ಎತ್ತರದ ಸೇತುವೆ ಮೇಲಿಂದ ಪಲ್ಟಿಯಾಗಿದೆ.‌ ಟ್ರ್ಯಾಕ್ಟರ್ ನ ಟ್ರಾಲಿ ಕಾರ್ಮಿಕರ ಮೈಮೇಲೆ ಬಿದ್ದಿದೆ.‌ ಸ್ಥಳದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ಸಾಗಿಸುವಾಗ ಇಬ್ಬರು ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ.

ಬೋಗೂರ ಗ್ತಾಮದಿಂದ ಕೇವಲ ಅರ್ಧ ಕಿ.ಮೀ. ದೂರದಲ್ಲಿ ಈ ಭೀಕರ ಅವಘಡ ಸಂಭವಿಸಿದೆ.‌ ಮೃತದೇಹಗಳನ್ನು ತೆಗೆಯಲು ಸ್ಥಳಿಯರು ಹರಸಾಹಸ ಪಡುತ್ತಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English