ಮಾಲ್ದಾರೆ ಹಂಚಿತಿಟ್ಟು ಗ್ರಾಮದಲ್ಲಿ ಕಾಡಾನೆ ದಾಳಿಗೆ ಬೆಳೆಗಾರ ಬಲಿ

10:45 AM, Monday, February 10th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

kaadane

ಮಡಿಕೇರಿ : ಕಾಡಾನೆ ದಾಳಿಯಿಂದ ಬೆಳೆಗಾರರೊಬ್ಬರು ದಾರುಣವಾಗಿ ಮೃತ ಪಟ್ಟಿರುವ ಘಟನೆ ವಿರಾಜಪೇಟೆ ತಾಲೂಕಿನ ಮಾಲ್ದಾರೆ ಸಮೀಪ ಹಂಚಿತಿಟ್ಟು ಗ್ರಾಮದಲ್ಲಿ ನಡೆದಿದೆ.

ಅವರೆಗುಂದ ಗ್ರಾಮದ ನಿವಾಸಿ ಪೆಮ್ಮಯ್ಯ(68) ಎಂಬುವವರೇ ಕಾಡಾನೆ ದಾಳಿಗೆ ಬಲಿಯಾದ ದುರ್ದೈವಿಯಾಗಿದ್ದಾರೆ.

ಮಾಲ್ದಾರೆ ಹಂಚಿತಿಟ್ಟು ಮಾರ್ಗದ ರಸ್ತೆ ಬದಿಯಲ್ಲಿ ಮೃತದೇಹ ಕಂಡ ಸ್ಥಳೀಯರು ತಕ್ಷಣ ಅರಣ್ಯ ಇಲಾಖೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭ ಕಾಡಾನೆ ದಾಳಿ ಮಾಡಿರುವುದು ಖಾತ್ರಿಯಾಯಿತು. ಎದೆ, ತಲೆ ಹಾಗೂ ಕಾಲಿನ ಭಾಗಕ್ಕೆ ತೀವ್ರ ಗಾಯಗಳಾಗಿ ಪೆಮ್ಮಯ್ಯ ಅವರು ಮೃತಪಟ್ಟಿದ್ದರು.

ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಹೆಚ್.ಎಸ್.ಬೋಜಪ್ಪ ಹಾಗೂ ಕುಶಾಲನಗರ ವಲಯದ ಎ.ಸಿ.ಎಫ್. ನೆಹರೂ, ವಲಯಾರಣ್ಯಾಧಿಕಾರಿ ಅನನ್ಯ ಕುಮಾರ್ ಭೇಟಿ ನೀಡಿದರು. ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಪೆಮ್ಮಯ್ಯ ಅವರ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ ರೂ.5 ಲಕ್ಷದ ಚೆಕ್ ವಿತರಿಸಿದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English