ಬೆಂಗಳೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಗೆದ್ದೆ ಗೆಲ್ಲುತ್ತಾರೆ ಎಂಬ ವಿಶ್ವಾಸವನ್ನು ಜೆಡಿಎಸ್ ನಾಯಕ, ಮಾಜಿ ಸಚಿವ ಜಿಟಿ ದೇವೇಗೌಡ ವ್ಯಕ್ತಪಡಿಸಿದ್ದಾರೆ.
ಮಾತನಾಡಿದ ಜಿಟಿ ದೇವೇಗೌಡ ಅವರು, ಚುನಾವಣೆಯಲ್ಲಿ ಸವದಿ ಸೋಲಿಸುವುದನ್ನು ಜನ ಒಪ್ಪುವುದಿಲ್ಲ. ಈ ಹಿನ್ನೆಲೆ ಅವರು ಗೆಲುವು ಸುಲಭವಾಗಲಿದೆ. ಅಲ್ಲದೇ, ಅವರಿಗೆ ಬಹುಮತ ಕೂಡ ಇದೆ ಎನ್ನುವ ಮೂಲಕ ಪಕ್ಷದ ನಾಯಕರಿಗೆ ಶಾಕ್ ನೀಡಿದ್ದಾರೆ.
ಮೈತ್ರಿ ಸರ್ಕಾರ ಪತನವಾದ ಬಳಿಕ ಸದಾ ಬಿಜೆಪಿ ನಾಯಕರ ಜೊತೆ ಗುರುತಿಸಿಕೊಳ್ಳುತ್ತಿರುವ ಜಿಟಿ ದೇವೇಗೌಡ, ಅವರ ಪರವಾಗಿಯೇ ಹೇಳಿಕೆ ನೀಡುತ್ತಿದ್ದಾರೆ. ಮೈಸೂರು ದಸರಾ ಕಾರ್ಯಕ್ರಮದಲ್ಲಿಯೂ ಯಡಿಯೂರಪ್ಪ ಜೊತೆ ವೇದಿಕೆ ಹಂಚಿಕೊಂಡ ಅವರು, ಬಿಜೆಪಿ ಸೇರಲಿದ್ದಾರೆ ಎಂಬ ಅನುಮಾನ ಮೂಡಿತ್ತು. ಆದರೆ, ತಾವು ಯಾವುದೇ ಪಕ್ಷ ಸೇರಲ್ಲ. ಜೆಡಿಎಸ್ನಲ್ಲಿಯೇ ಇರುತ್ತೇನೆ ಎಂದಿದ್ದ ಅವರು, ಪಕ್ಷದ ನಾಯಕರೊಂದಿಗೂ ಕೂಡ ಅಂತರ ಕಾಯ್ದುಗೊಂಡು ಬಂದಿದ್ದಾರೆ.