ಹೊಸಪೇಟೆ ಬಳಿ ಅಪಘಾತ ಪ್ರಕರಣ : ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ; ಡಿಸಿಎಂ ಅಶ್ವತ್ಥ್ ನಾರಾಯಣ್

10:33 AM, Friday, February 14th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Ashwath-Narayan

ಶಿವಮೊಗ್ಗ : ಕಾನೂನಿನ ಅಡಿಯಲ್ಲಿ ಎಲ್ಲರೂ ಸಮಾನರು ಹೀಗಾಗಿ ಹೊಸಪೇಟೆ ಬಳಿಯ ಅಪಘಾತ ಪ್ರಕರಣದ ಆರೋಪಿಗಳು ಯಾರೇ ಆಗಿರಲಿ ಅವರಿಗೆ ಸೂಕ್ತ ಶಿಕ್ಷೆ ಖಂಡಿತ ಆಗುತ್ತದೆ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.

ಫೆ.10 ರಂದು ಬಳ್ಳಾರಿ ಜಿಲ್ಲೆ ಹೊಸಪೇಟೆ ಬಳಿ ಒಂದು ಅಪಘಾತ ನಡೆದಿತ್ತು. ಈ ಅಪಘಾತದಲ್ಲಿ ಸಚಿನ್ ಮತ್ತು ರವಿನಾಯ್ಕ್ ಎಂಬ ಇಬ್ಬರು ಯುವಕರು ಮೃತಪಟ್ಟಿದ್ದರು. ಈ ವೇಳೆ ಕಾರು ಚಲಾಯಿಸುತ್ತಿದ್ದದ್ದು ಸಚಿವ ಆರ್. ಅಶೋಕ್ ಅವರ ಮಗ ಶರತ್. ಹೀಗಾಗಿ ಪೊಲೀಸರು ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿದ್ದಾರೆ ಎಂದು ಸುದ್ದಿ ಎಲ್ಲೆಡೆ ವ್ಯಾಪಕವಾಗಿತ್ತು.

ಈ ಕುರಿತು ಶಿವಮೊಗ್ಗದಲ್ಲಿ ಗುರುವಾರ ಹೇಳಿಕೆ ನೀಡಿರುವ ಡಿಸಿಎಂ ಅಶ್ವತ್ಥ್ ನಾರಾಯಣ್, “ವಿಐಪಿ ಕುಟುಂಬಕ್ಕೆ ಸಂಬಂಧಿಸಿದ ಪ್ರಕರಣವಾದಾಗ ಪೊಲೀಸರು ಇನ್ನಷ್ಟು ಗಂಭೀರವಾಗಿ ಪರಿಗಣಿಸುತ್ತಾರೆ. ಯಾರೂ ಯಾರ ಬದುಕಿನ ಜೊತೆಯೂ ಚೆಲ್ಲಾಟವಾಡಬಾರದು. ಈ ವಿಚಾರದಲ್ಲಿ ಯಾರ ತಪ್ಪಿದೆಯೋ ಅವರಿಗೆ ಸೂಕ್ತ ಶಿಕ್ಷೆಯಾಗಲಿ.

ಈ ವಿಚಾರದಲ್ಲಿ ತಾರತಮ್ಯವಾಗುವುದಿಲ್ಲ. ಕಾನೂನಿನ ಎದುರು ಎಲ್ಲರೂ ಸಮಾನರಾಗಿದ್ದು, ಘಟನೆಯ ಬಗ್ಗೆ ಪೊಲೀಸರು ಕಾನೂನು ರೀತಿಯ ಕ್ರಮ ತೆಗೆದುಕೊಳ್ಳುತ್ತಾರೆ” ಎಂದು ಆಶ್ವಾಸನೆ ನೀಡಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English