ಮನೆಯಲ್ಲಿ ಪ್ರೀತಿಗೆ ವಿರೋಧ : ಹಾರಂಗಿ ಜಲಾಶಯದ ಹಿನ್ನೀರಿಗೆ ಜಿಗಿದು ಯುವ ಪ್ರೇಮಿಗಳು ಆತ್ಮಹತ್ಯೆ

11:44 AM, Saturday, February 15th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

madikeri

ಮಡಿಕೇರಿ : ಮನೆಯಲ್ಲಿ ಪ್ರೀತಿಗೆ ವಿರೋಧ ವ್ಯಕ್ತಪಡಿಸಿ, ಬೇರೆ ಹುಡುಗನೊಂದಿಗೆ ವಿವಾಹ ನಿಶ್ಚಯಿಸಿದ ಕಾರಣ ಪ್ರೇಮಿಗಳ ದಿನದಂದೇ ಹಾರಂಗಿ ಜಲಾಶಯದ ಹಿನ್ನೀರಿಗೆ ಜಿಗಿದು ಯುವ ಪ್ರೇಮಿಗಳು ಮಾಡಿಕೊಂಡ ಘಟನೆ ಹಾರಂಗಿಯ ಇಡಿಸಿಎಲ್‌ ಘಟಕ ಸಮೀಪ ನಡೆದಿದೆ.

ಮೃತರನ್ನು ಹುಣಸೂರು ತಾಲೂಕಿನ ಕೊತ್ತೆಗಾಲ ಗ್ರಾಮದ ನಾಗರಾಜುಗೌಡ ಎಂಬವರ ಪುತ್ರ ಸಚಿನ್‌(21) ಯಮಗುಂಬ ಗ್ರಾಮದ ಜಲೇಂದ್ರ ಎಂಬವರ ಪುತ್ರಿ ಸಿಂಧುಶ್ರೀ(19) ಎಂದು ಗುರುತಿಸಲಾಗಿದೆ.

ಇವರಿಬ್ಬರೂ ಹುಣಸೂರು ಸರಕಾರಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಿಂದಲೂ ಪರಸ್ಪರ ಪ್ರೀತಿಸುತ್ತಿದ್ದರು. ಕಳೆದ ಒಂದು ವರ್ಷದಿಂದ ಈ ವಿಚಾರ ಮನೆಯವರಿಗೆ ತಿಳಿದು, ಅಂತರ್ಜಾತಿ ಎಂಬ ಕಾರಣಕ್ಕೆ ಎರಡೂ ಮನೆಯವರಿಂದಲೂ ವಿರೋಧ ವ್ಯಕ್ತವಾಗಿತ್ತು ಎನ್ನಲಾಗಿದೆ.

ಈ ನಡುವೆ ಸಿಂಧುಶ್ರೀಗೆ ಪಿರಿಯಾಪಟ್ಟಣ ತಾಲೂಕಿನ ಯುವಕನೊಂದಿಗೆ ಭಾನುವಾರ ಅಂದರೆ ಫೆ.16 ರಂದು ಮದುವೆ ನಿಶ್ಚಯವಾಗಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮದಿಂದ ಸಚಿನ್‌ಗೆ ಸೇರಿದ ಬೈಕ್‌ನಲ್ಲಿ ಗುಟ್ಟಾಗಿ ನಿನ್ನೆ ಬೆಳಿಗ್ಗೆ ಹಾರಂಗಿಗೆ ಇಬ್ಬರೂ ಆಗಮಿಸಿದ್ದು, ಹಾರಂಗಿಯ ಇಡಿಸಿಎಲ್‌ ಘಟಕ ಸಮೀಪದಲ್ಲಿ ನೀರಿಗೆ ಹಾರಿ ಪ್ರಾಣ ಬಿಟ್ಟಿದ್ದಾರೆ.

ಆತ್ಮಹತ್ಯೆಗೂ ಮುನ್ನ ಸಚಿನ್‌ ತನ್ನ ಸಂಬಂಧಿಕರಿಗೆ ಕರೆ ಮಾಡಿ ಈ ವಿಷಯ ತಿಳಿಸಿದ್ದಾರೆ ಎನ್ನಲಾಗಿದ್ದು ಆತನ ಕಡೆಯವರು ಹಾರಂಗಿಗೆ ಭೇಟಿ ನೀಡುವಷ್ಟರಲ್ಲಿ ಇಬ್ಬರೂ ಮೃತಪಟ್ಟಿದ್ದರು.

ಕುಶಾಲನಗರ ಅಗ್ನಿಶಾಮಕ ದಳದ ಸಿಬ್ಬಂದಿ ಬೋಟ್‌ ಸಹಾಯದಿಂದ ಮೃತದೇಹಗಳನ್ನು ನೀರಿನಿಂದ ಮೇಲೆತ್ತಿದರು.

ಕುಶಾಲನಗರ ಗ್ರಾಮಾಂತರ ಪೊಲೀಸ್‌ ಠಾಣಾಧಿಕಾರಿ ನಂದೀಶ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English