ಮೈಸೂರು : ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಮೊಬೈಲ್ ಬ್ಲಾಸ್ಟ್ ಆದ ಪರಿಣಾಮ ಬೈಕ್ ಸವಾರರೋರ್ವರು ಕುಸಿದು ಬಿದ್ದ ಪರಿಣಾಮ ಗಾಯಗೊಂಡ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ರಸ್ತೆಯಲ್ಲಿ ನಡೆದಿದೆ.
ಗಾಯಗೊಂಡವರನ್ನು ಕುರಿಹುಂಡಿಯ ಬಸವರಾಜು ( ಬಸವಣ್ಣ) ಎಂದು ಗುರುತಿಸಲಾಗಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕಿಸೆಯಲ್ಲಿದ್ದ ವಿವೋ ಕಂಪನಿಯ ಮೊಬೈಲ್ ಬ್ಲಾಸ್ಟ್ ಆಗಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ರಸ್ತೆಯಲ್ಲಿ ಕುರಿಹುಂಡಿಯಿಂದ ಹುಲ್ಲಹಳ್ಳಿಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಮೊಬೈಲ್ ಸಿಡಿದ ರಭಸಕ್ಕೆ ಬೈಕ್ ನಿಂದ ಕೆಳಗೆ ಬಿದ್ದಿದ್ದು, ತೀವ್ರ ರಕ್ತಸ್ರಾವವಾಗಿ ಪ್ರಜ್ಞೆ ತಪ್ಪಿದ್ದಾರೆ. ಸಾರ್ವಜನಿಕರು ಮೈಸೂರಿನ ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಿದ್ದಾರೆ. ನಿನ್ನೆ ರಾತ್ರಿ ಘಟನೆ ನಡೆದಿದೆ ಎನ್ನಲಾಗಿದೆ.