ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ಶಿವನಿಗೆ ವಿಶೇಷ ಪೂಜೆ

4:16 PM, Friday, February 21st, 2020
Share
1 Star2 Stars3 Stars4 Stars5 Stars
(5 rating, 1 votes)
Loading...

kadri

ಮಂಗಳೂರು : ಇಂದು ನಾಡಿನಾದ್ಯಂತ ಮಹಾಶಿವರಾತ್ರಿ ಸಂಭ್ರಮ. ನಗರದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ಶುಕ್ರವಾರ ಬೆಳಗ್ಗೆಯಿಂದಲೇ ನೂರಾರು ಭಕ್ತರು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

kadri

ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಸಾವಿರಾರು ಭಕ್ತಾಧಿಗಳು ಸರದಿ ಸಾಲಿನಲ್ಲಿ ನಿಂತು ಮಂಜುನಾಥ ಸ್ವಾಮಿಗೆ ಅಭೀಷೆಕ ಮಾಡಿದರು. ಭಜನಾ ಸಂಕೀರ್ತನ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

kadri

ಇನ್ನು ಮಹಾಶಿವರಾತ್ರಿ ಪ್ರಯುಕ್ತ ದೇವಾಲಯ ಹೂವಿನ ಅಲಂಕಾರ ಹಾಗೂ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ. ಶಿವರಾತ್ರಿ ಹಿನ್ನೆಲೆಯಲ್ಲಿ ಇಂದು ಮುಂಜಾನೆ ನಾಲ್ಕು ಗಂಟೆಯಿಂದಲೇ ವಿಶೇಷ ಪೂಜೆ ನಡೆಯುತ್ತಿದ್ದು, ನಾಳೆ ಮಧ್ಯಾಹ್ನದವರೆಗೆ ವಿಶೇಷ ಪೂಜೆ ನಡೆಯಲಿದೆ.

kadri

kadri

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English