- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮರ ಬಿದ್ದು ಕಾರ್ಮಿಕ ದುರ್ಮರಣ

umesh [1]

ಮಡಿಕೇರಿ : ಮರ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪದ ಈರಳೆವಳವಾಡಿ ಗ್ರಾಮದ ಅಭ್ಯಾಲ ತೋಟದಲ್ಲಿ ನಡೆದಿದೆ.

ನಾಕೂರು ಗ್ರಾಮದ ಉಮೇಶ್ ಎಂಬುವವರು ಇಂದು ಬೆಳಗ್ಗೆ ಸಹ ಕಾರ್ಮಿಕರೊಂದಿಗೆ ಮರವೊಂದನ್ನು ಕಡಿಯುವ ಕೆಲಸದಲ್ಲಿ ತೊಡಗಿದ್ದರು. ಮರಕ್ಕೆ ಕಟ್ಟಲಾಗಿದ್ದ ಹಗ್ಗವನ್ನು ಹಿಡಿದು ಎಳೆಯುತ್ತಿದ್ದಾಗ ಆಯತಪ್ಪಿ ಬಿದ್ದಿದ್ದಾರೆ. ದುರಾದೃಷ್ಟವಶಾತ್ ಅವರ ಮೇಲೆಯೇ ಮರ ಬಿದ್ದು, ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದರು.