[1]ಮಂಗಳೂರು : ನಗರದ ಮಿಲಾಗ್ರಿಸ್ ಬಳಿ ಟೆಲಿಫೋನ್ ಬೂತ್ ಹಾಗೂ ಪೇಪರ್ ಸ್ಟಾಲ್ ಹೊಂದಿರುವ ಸಾಮಾಜಿಕ ಕಾರ್ಯಕರ್ತ ಮೆಲ್ವಿಲ್ ಪಿಂಟೋ ಎಂಬವರ ಅಂಗಡಿಗೆ ಭಾನುವಾರ ಸಂಜೆ ಆಗಮಿಸಿದ ದುಷ್ಕರ್ಮಿಗಳು ‘ಕರಾವಳಿ ಅಲೆ’ ಮಾರಾಟ ಮಾಡಬಾರದು ಎಂದು ಬೆದರಿಸಿ ಕಾಯಿನ್ ಬಾಕ್ಸ್ ಮತ್ತು ಕಪಾಟಿಗೆ ಹಾನಿ ಮಾಡಿ ‘ಕರಾವಳಿ ಅಲೆ’ಯ ಪ್ರತಿಗಳನ್ನು ಹರಿದು ಹಾಕಿರುವ ಘಟನೆ ನಡೆದಿದೆ.
ಬೈಕ್ನಲ್ಲಿ ಮೂರು ಮಂದಿ ಬಂದಿದ್ದು ಒಬ್ಬಾತನ ಬಳಿ ಮಾರಕಾಯುಧ ಇತ್ತು ಎಂದು ಮೆಲ್ವಿಲ್ ಪಿಂಟೊ ತಿಳಿಸಿದ್ದಾರೆ.
ಬಳಿಕ ಕಂಕನಾಡಿ ಆಸುಪಾಸಿನ ಪತ್ರಿಕಾ ಸ್ಟಾಲ್ಗಳಿಗೆ ತೆರಳಿದ ದುಷ್ಕರ್ಮಿಗಳು ‘ಕರಾವಳಿ ಅಲೆ’ ಮಾರಾಟ ಮಾಡಬಾರದು ಎಂದು ಬೆದರಿಸಿ ಹೋಗಿದ್ದಾರೆ. ಎರಡೂ ಕಡೆ ನಡೆದ ಕೃತ್ಯವನ್ನು ಒಂದೇ ತಂಡ ಮಾಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಇದೀಗ ಈ ಬಗ್ಗೆ ಪ್ರಕರಣ ದಾಖಲಿಸಿದ ಬಂದರು ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.